ಮಲ್ಲಿಕಾರ್ಜುನ್ ಖರ್ಗೆ 
ದೇಶ

ಲೋಕಸಭೆಯಲ್ಲಿ ಅಧಿಕಾರಿಯ 'ಕಣ್ಗಾವಲು': ಮಲ್ಲಿಕಾರ್ಜುನ್ ಖರ್ಗೆ ಆರೋಪ

ಲೋಕಸಭೆ ಕಲಾಪ ಸೋಮವಾರ ಸುಗಮವಾಗಿಯೇ ನಡೆಯುತ್ತಿತ್ತು. ಆದರೆ ಪ್ರಶ್ನೋತ್ತರ ಅವಧಿಯ ನಂತರ...

ನವದೆಹಲಿ: ಲೋಕಸಭೆ ಕಲಾಪ ಸೋಮವಾರ ಸುಗಮವಾಗಿಯೇ ನಡೆಯುತ್ತಿತ್ತು. ಆದರೆ ಪ್ರಶ್ನೋತ್ತರ ಅವಧಿಯ ನಂತರ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರು ಅಧಿಕಾರಿಯೊಬ್ಬರು ಕಲಾಪದ ಟಿಪ್ಪಣಿ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಗದಲ್ಲ ಸೃಷ್ಟಿಸಿದರು.
ಅಧಿಕಾರಿಗಳ ಗ್ಯಾಲರಿಯಲ್ಲಿರುವ ಅಧಿಕಾರಿಯೊಬ್ಬರು ಎದ್ದು ನಿಂತು ಸಂಸದರ ತಲೆ ಎಣಿಕೆ ಮಾಡುತ್ತಿರುವುದನ್ನು ಗಮನಿಸಿದರೆ ಲೋಕಸಭೆ 'ಕಣ್ಗಾವಲಿನಲ್ಲಿದೆ' ಎಂದು ಖರ್ಗೆ ಆರೋಪಿಸಿದರು.
ಈ ವೇಳೆ ಎಡರಂಗದ ಕೆ ಕರುಣಾಕರನ್ ಮತ್ತು ಪಿಕೆ ಶ್ರೀಮತಿ ಟೀಚರ್ ಸೇರಿದಂತೆ ಹಲವರು  ಖರ್ಗೆ ಅವರ ಬೆಂಬಲಕ್ಕೆ ನಿಂತರು.
ಅಧಿಕಾರಿಗಳ ಗ್ಯಾಲರಿಯಲ್ಲಿರುವ ಅಧಿಕಾರಿ ಸಂಸದೀಯ ವ್ಯವಹಾರಗಳ ಸಚಿವಾಲಯದವರು. ಅವರು ತಮ್ಮ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ಮೇಘವಾಲ್ ಅವರು ಹೇಳಿದರು. 
ಅಧಿಕಾರಿಯ ಕಣ್ಗಾವಲಿನ ಬಗ್ಗೆ ತಾವು ಪರಿಶೀಲಿಸುವುದಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಧರಣಿನಿರತ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT