ಆನಂದ್ ಶರ್ಮಾ 
ದೇಶ

ರಾಜಕೀಯವಾಗಿ ಭದ್ರಗೊಳ್ಳಲು ಕೇಂದ್ರ ಸರ್ಕಾರದಿಂದ ಸಿಬಿಐ, ಇಡಿ ದುರುಪಯೋಗ: ಆನಂದ್ ಶರ್ಮಾ

ಎನ್ ಡಿಎ ಸರ್ಕಾರ ರಾಜಕೀಯವಾಗಿ ನೆಲೆಯೂರಲು ಕೇಂದ್ರದ ಸಿಬಿಐ, ಇಡಿ ಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ, ಆ ಮೂಲಕ ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ  ರಾಜಕೀಯವಾಗಿ ನೆಲೆಯೂರಲು ಕೇಂದ್ರದ ಸಿಬಿಐ, ಇಡಿ ಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ, ಆ ಮೂಲಕ ದೇಶಾದ್ಯಂತ, ಅಪನಂಬಿಕೆ, ಭಯ ಮತ್ತು ಭಯೋತ್ಪಾದನೆ ಹೆಚ್ಚಿಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಆನಂದ್ ಶರ್ಮಾ ಆರೋಪಿಸಿದ್ದಾರೆ.
ಲೋಕಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ  ಶರ್ಮಾ, ಸಿಬಿಐ, ಡಿಆರ್ ಐ ಮತ್ತು ಇಡಿಗಳಿಂದ ಒಂದೇ ಕೇಸಿಗೆ ಹಲವು ಎಫ್ ಐಆರ್  ಮತ್ತು ಕೇಸುಗಳನ್ನು ದಾಖಲಿಸಲಾಗುತ್ತಿದೆ ಎಂದು ದೂರಿದ್ದಾರೆ
ರಾಜಕೀಯ ಸೇಡಿಗೆ ಕೇಂದ್ರದ ಏಜೆನ್ಸಿಗಳನ್ನು  ಉಪಕರಣಗಳಾಗಿ ಬಳಸಿಕೊಳ್ಳಲಾಗುತ್ತಿದೆ. ಭ್ರಷ್ಟಾಚಾರ ನಿರ್ಧಾರ ಮತ್ತು ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವುದರ ನಡುವೆ ಅಂತರವಿದೆ ಎಂದು ಹೇಳಿದ್ದಾರೆ
ತನಿಖಾ ಸಂಸ್ಥೆಗಳು ವ್ಯಕ್ತಿಗಳ ವಿರುದ್ಧ ದೋಷಾರೋಪಣೆ ಮಾಡಿ ಆ ಮೂಲಕ ತಪ್ಪೊಪ್ಪಿಕೊಳ್ಳುವಂತೆ ಮಾಡುತ್ತಿವೆ ಎಂದು ಶರ್ಮಾ ದೂರಿದ್ದಾರೆ..
ಇನ್ನೂ ಶರ್ಮಾ ಅವರ ಆರೋಪಕ್ಕೆ ಉತ್ತರ ನೀಡಿದ ಕೇಂದ್ರ ಸಚಿವ ಪಿಯೂಶ್ ಗೋಯೆಲ್,  ಶರ್ಮಾ ತನಿಖಾ ಸಂಸ್ಥೆಗಳ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT