ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ 
ದೇಶ

ಕಣ್ಣು ಹೊಡೆದ ರಾಹುಲ್: ಲೋಕಸಭೆಯಲ್ಲಿ ಪ್ರಕಾಶ್ ಜಾವಡೇಕರ್ ಗೇಲಿ

ಅವಿಶ್ವಾಸ ನಿರ್ಣಯ ಮಂಡನೆ ಕುರಿತ ಚರ್ಚೆ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಲೋಕಸಭೆಯಲ್ಲಿ...

ನವದೆಹಲಿ: ಅವಿಶ್ವಾಸ ನಿರ್ಣಯ ಮಂಡನೆ ಕುರಿತ ಚರ್ಚೆ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕಣ್ಣು ಹೊಡೆದಿದ್ದನ್ನು ಕೇಂದ್ರ ಸಚಿವ ಪ್ರಕಾಶ್ ಜeವಡೇಕರ್ ಅವರು ಸೋಮವಾರ ಗೇಲಿ ಮಾಡಿದ್ದಾರೆ. 
ಲೋಕಸಭೆ ಕಲಾಪದಲ್ಲಿಂದು ರಾಹುಲ್ ಗಾಂಧಿಯವರು ಕಣ್ಣು ಹೊಡೆದಿದ್ದನ್ನು ಪ್ರಸಾಪ ಮಾಡಿದ ಜeವಡೇಕರ್ ಅವರು, ಲೋಕಸಭೆಯಲ್ಲಿ ನಡೆಯುತ್ತಿರುವ ಕಲಾಪದ ನೇರ ಪ್ರಸಾರವನ್ನು ಪ್ರತೀಯೊಬ್ಬರೂ ನೋಡುತ್ತಿದ್ದಾರೆ. ಕಲಾಪದ ವೇಳೆ ಯಾರೇ ಕಣ್ಣು ಹೊಡೆದರೂ, ಅದನ್ನು ಪ್ರತೀಯೊಬ್ಬರೂ ನೋಡುತ್ತಾರೆಂದು ಗೇಲಿ ಮಾಡಿದ್ದಾರೆ. 
ಇದಕ್ಕೂ ಮುನ್ನ ಮಾತನಾಡಿದ್ದ ಟಿಡಿಪಿ ಸಂಸದ ಜಯದೇವ ಗಲ್ಲಾ ಅವರು, ಬಜೆಟ್ ಅಧಿವೇಶನದ ವೇಳೆ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದೆವು. ಆದರೆ, ಅದು ಸಾಧ್ಯವಾಗಲಿಲ್ಲ. ಮುಂಗಾರು ಅಧಿವೇಶನದಲ್ಲಿ ಕೊನೆಗೂ ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದೆವು. ಆದರೆ, ಪ್ರಧಾನಿ ಮೋದಿ ನಮ್ಮ ಯಾವುದೇ ಪ್ರಶ್ನೆಗಳಿಗೂ ಕ್ಯಾರೆ ಎನ್ನಲ್ಲಿಲ್ಲ. ಈ ಹಿಂದೆ ನೀಡಿದ್ದ ಹೇಳಿಕೆಗಳನ್ನೇ ಮತ್ತೆ ಕೇಳಿದೆವು. ಯಾವ ಬದಲಾವಣೆಗಳೂ ಆಗಲಿಲ್ಲ. ಪ್ರತಿಭಟಿಸುವುದು ಬಿಟ್ಟರೆ ನಮಗೆ ಬೇರಾವುದೇ ದಾರಿಯಿಲ್ಲ ಎಂದು ಹೇಳಿದರು. 

ಇದಾದ ಬಳಿಕ ಮಾತನಾಡಿದ ಅಸಾದುದ್ದೀನ್ ಓವೈಸಿ, ಗೋ ರಕ್ಷಕರಿಗೆ ರಾಜಸ್ಥಾನ ಪೊಲೀಸರೇ ಬೆಂಬಲ ನೀಡುತ್ತಿದ್ದಾರೆ. ಪೊಲೀಸರ ಕ್ರಮಗಳನ್ನು ನೋಡುತ್ತಿದ್ದರೆ ನನಗೆ ಆಶ್ಚರ್ಯವಾಗುತ್ತಿದೆ. ತಿಲುಖಾನ್ ಕೊಲೆ ಪ್ರಕರಣದಲ್ಲೂ ಇದೇ ರೀತಿ ವರ್ತಿಸಿದ್ದರು. ಗೋರಕ್ಷಕರೂ ಹಾಗೂ ರಾಜ್ಯ ಪೊಲೀಸರು ಕೈಜೋಡಿಸಿದ್ದಾರೆಂದು ಆರೋಪಿಸಿದರು. 

ಇದೇ ವೇಳೆ ದೇಶದಲ್ಲಿ ಅತ್ಯಾಚಾರ ಪ್ರಕಣಗಳು ಹೆಚ್ಚುತ್ತಿವೆ ಎಂಬ ಎನ್'ಸಿಆರ್'ಬಿ ವರದಿಯನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ಜ್ಯೋತಿರಾಧಿತ್ಯ ಸಿನ್ಹಾ ಅವರು, ದೇಶದಲ್ಲಿ ಈ ವರೆಗೂ 40,000 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಕೆಲ ಅತ್ಯಾಚಾರ ಪ್ರಕರಣಗಳಲ್ಲಿ ಬಿಜೆಪಿ ನಾಯಕರೂ ಕೂಡ ಭಾಗಿಯಾಗಿರುವುದು ವರದಿಯಾಗಿವೆ ಎಂದರು. ಈ ವೇಳೆ ಕಾಂಗ್ರೆಸ್ ನಾಯಕರು ಆಡಳಿತಾರೂಢ ಸರ್ಕಾರದ ವಿರುದ್ಧ ಘೋಷಣಾ ವಾಕ್ಯಗಳನ್ನು ಕೂಗಲು ಆರಂಭಿಸಿದರು. 

ಈ ವೇಳೆ ಮಾತನಾಡಿದ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಅತ್ಯಾಚಾರ ಪ್ರಕರಣಗಳಲ್ಲಿ ರಾಜಕೀಯ ಮಾಡಬೇಡಿ. ನಾನೂ ಕೂಡ ಒಂದು ಹೆಣ್ಣು ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT