ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ 
ದೇಶ

ಕಣ್ಣು ಹೊಡೆದ ರಾಹುಲ್: ಲೋಕಸಭೆಯಲ್ಲಿ ಪ್ರಕಾಶ್ ಜಾವಡೇಕರ್ ಗೇಲಿ

ಅವಿಶ್ವಾಸ ನಿರ್ಣಯ ಮಂಡನೆ ಕುರಿತ ಚರ್ಚೆ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಲೋಕಸಭೆಯಲ್ಲಿ...

ನವದೆಹಲಿ: ಅವಿಶ್ವಾಸ ನಿರ್ಣಯ ಮಂಡನೆ ಕುರಿತ ಚರ್ಚೆ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕಣ್ಣು ಹೊಡೆದಿದ್ದನ್ನು ಕೇಂದ್ರ ಸಚಿವ ಪ್ರಕಾಶ್ ಜeವಡೇಕರ್ ಅವರು ಸೋಮವಾರ ಗೇಲಿ ಮಾಡಿದ್ದಾರೆ. 
ಲೋಕಸಭೆ ಕಲಾಪದಲ್ಲಿಂದು ರಾಹುಲ್ ಗಾಂಧಿಯವರು ಕಣ್ಣು ಹೊಡೆದಿದ್ದನ್ನು ಪ್ರಸಾಪ ಮಾಡಿದ ಜeವಡೇಕರ್ ಅವರು, ಲೋಕಸಭೆಯಲ್ಲಿ ನಡೆಯುತ್ತಿರುವ ಕಲಾಪದ ನೇರ ಪ್ರಸಾರವನ್ನು ಪ್ರತೀಯೊಬ್ಬರೂ ನೋಡುತ್ತಿದ್ದಾರೆ. ಕಲಾಪದ ವೇಳೆ ಯಾರೇ ಕಣ್ಣು ಹೊಡೆದರೂ, ಅದನ್ನು ಪ್ರತೀಯೊಬ್ಬರೂ ನೋಡುತ್ತಾರೆಂದು ಗೇಲಿ ಮಾಡಿದ್ದಾರೆ. 
ಇದಕ್ಕೂ ಮುನ್ನ ಮಾತನಾಡಿದ್ದ ಟಿಡಿಪಿ ಸಂಸದ ಜಯದೇವ ಗಲ್ಲಾ ಅವರು, ಬಜೆಟ್ ಅಧಿವೇಶನದ ವೇಳೆ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದೆವು. ಆದರೆ, ಅದು ಸಾಧ್ಯವಾಗಲಿಲ್ಲ. ಮುಂಗಾರು ಅಧಿವೇಶನದಲ್ಲಿ ಕೊನೆಗೂ ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದೆವು. ಆದರೆ, ಪ್ರಧಾನಿ ಮೋದಿ ನಮ್ಮ ಯಾವುದೇ ಪ್ರಶ್ನೆಗಳಿಗೂ ಕ್ಯಾರೆ ಎನ್ನಲ್ಲಿಲ್ಲ. ಈ ಹಿಂದೆ ನೀಡಿದ್ದ ಹೇಳಿಕೆಗಳನ್ನೇ ಮತ್ತೆ ಕೇಳಿದೆವು. ಯಾವ ಬದಲಾವಣೆಗಳೂ ಆಗಲಿಲ್ಲ. ಪ್ರತಿಭಟಿಸುವುದು ಬಿಟ್ಟರೆ ನಮಗೆ ಬೇರಾವುದೇ ದಾರಿಯಿಲ್ಲ ಎಂದು ಹೇಳಿದರು. 

ಇದಾದ ಬಳಿಕ ಮಾತನಾಡಿದ ಅಸಾದುದ್ದೀನ್ ಓವೈಸಿ, ಗೋ ರಕ್ಷಕರಿಗೆ ರಾಜಸ್ಥಾನ ಪೊಲೀಸರೇ ಬೆಂಬಲ ನೀಡುತ್ತಿದ್ದಾರೆ. ಪೊಲೀಸರ ಕ್ರಮಗಳನ್ನು ನೋಡುತ್ತಿದ್ದರೆ ನನಗೆ ಆಶ್ಚರ್ಯವಾಗುತ್ತಿದೆ. ತಿಲುಖಾನ್ ಕೊಲೆ ಪ್ರಕರಣದಲ್ಲೂ ಇದೇ ರೀತಿ ವರ್ತಿಸಿದ್ದರು. ಗೋರಕ್ಷಕರೂ ಹಾಗೂ ರಾಜ್ಯ ಪೊಲೀಸರು ಕೈಜೋಡಿಸಿದ್ದಾರೆಂದು ಆರೋಪಿಸಿದರು. 

ಇದೇ ವೇಳೆ ದೇಶದಲ್ಲಿ ಅತ್ಯಾಚಾರ ಪ್ರಕಣಗಳು ಹೆಚ್ಚುತ್ತಿವೆ ಎಂಬ ಎನ್'ಸಿಆರ್'ಬಿ ವರದಿಯನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ಜ್ಯೋತಿರಾಧಿತ್ಯ ಸಿನ್ಹಾ ಅವರು, ದೇಶದಲ್ಲಿ ಈ ವರೆಗೂ 40,000 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಕೆಲ ಅತ್ಯಾಚಾರ ಪ್ರಕರಣಗಳಲ್ಲಿ ಬಿಜೆಪಿ ನಾಯಕರೂ ಕೂಡ ಭಾಗಿಯಾಗಿರುವುದು ವರದಿಯಾಗಿವೆ ಎಂದರು. ಈ ವೇಳೆ ಕಾಂಗ್ರೆಸ್ ನಾಯಕರು ಆಡಳಿತಾರೂಢ ಸರ್ಕಾರದ ವಿರುದ್ಧ ಘೋಷಣಾ ವಾಕ್ಯಗಳನ್ನು ಕೂಗಲು ಆರಂಭಿಸಿದರು. 

ಈ ವೇಳೆ ಮಾತನಾಡಿದ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಅತ್ಯಾಚಾರ ಪ್ರಕರಣಗಳಲ್ಲಿ ರಾಜಕೀಯ ಮಾಡಬೇಡಿ. ನಾನೂ ಕೂಡ ಒಂದು ಹೆಣ್ಣು ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು, ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

SCROLL FOR NEXT