ಸಂಗ್ರಹ ಚಿತ್ರ 
ದೇಶ

ಇದು ಮೋದಿಯವರ 'ಕ್ರೂರ ನವ ಭಾರತ', ಅಮಾಯಕರು ಸಾಯುತ್ತಿದ್ದಾರೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರ ಕ್ರೂರ ನವ ಭಾರತದಲ್ಲಿ ಅಮಾಯಕರು ಸಾವನ್ನಪ್ಪುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಹೇಳಿದ್ದಾರೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕ್ರೂರ ನವ ಭಾರತದಲ್ಲಿ ಅಮಾಯಕರು ಸಾವನ್ನಪ್ಪುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಜಸ್ಥಾನದ ಆಳ್ವಾರ್ ನಲ್ಲಿ ನಡೆದ ಸಾಮೂಹಿಕ ಹಲ್ಲೆ ಮತ್ತು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಸಾಮೂಹಿಕ ಹಲ್ಲೆಗೀಡಾಗಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲು ಪೊಲೀಸರು 3 ಗಂಟೆ ತೆಗೆದುಕೊಂಡಿದ್ದಾಕೆ. ಕೇವಲ 6 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ಸೇರಿಸಲು ಅಷ್ಟು ಹೊತ್ತು ಬೇಕೇ? ವಾಹನದಲ್ಲಿದ್ದ ವ್ಯಕ್ತಿ ನೋವಿನಿಂದ ನರಳುತ್ತಿದ್ದರೆ ಮಾರ್ಗಮಧ್ಯೆ ಪೊಲೀಸರು ಟೀ ವಿರಾಮ ತೆಗೆದುಕೊಂಡಿದ್ದಾರೆ. ಈ ಮೋದಿಯ ಕ್ರೂರ ನವ ಭಾರತದಲ್ಲಿ ಮಾನವೀಯತೆಯ ಜಾಗದಲ್ಲಿ ದ್ವೇಷ ಸ್ಥಾನ ಪಡೆದಿದೆ. ಅಮಾಯಕರು ಈ ದ್ವೇಷಕ್ಕೆ ಬಲಿಯಾಗುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇನ್ನು ಕೆಲ ಮಾಧ್ಯಮಗಳು ರಾಜಸ್ತಾನದ ಆಳ್ವಾರ್ ನಲ್ಲಿ ನಡೆದ ಸಾಮೂಹಿಕ ಹಲ್ಲೆ ಮತ್ತು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ವರದಿಗಳನ್ನು ಬಿತ್ತರಿಸಿದ್ದವು. ವರದಿಯನ್ವಯ ಗೋಸಂರಕ್ಷಕರ ಸೋಗಿನಲ್ಲಿ ದಾಳಿ ಮಾಡಿದ್ದವಂರಿಂದ ಗಂಭೀರವಾಗಿ ಗಾಯಗೊಂಡಿದ್ದ ರಕ್ಬರ್ ಖಾನ್ ನನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸುವಲ್ಲಿ ವಿಳಂಬ ಮಾಡಿದ್ದರಿಂದಲೇ ಆತ ಸಾವನ್ನಪ್ಪಿದ್ದ ಎಂದು ಹೇಳಿದ್ದವು.
ಘಟನಾ ಪ್ರದೇಶದಿಂದ ಆಸ್ಪತ್ರೆಗೆ ಕೇವಲ 6 ಕಿ.ಮೀ ಅಂತರವಿದ್ದು. ವಾಹನದಲ್ಲಿ ತೆರಳಿದರೆ ಕೇವಲ 15 ನಿಮಿದಲ್ಲಿ ಆಸ್ಪತ್ರೆ ಸೇರಬಹುದು. ಆದರೆ ಪೊಲೀಸರು 3 ಗಂಟೆ ತೆಗೆದುಕೊಂಡರು. ಸಾವುನೋವಿನ ನಡುವೆ ಸಂತ್ರಸ್ಥ ನರಳುತ್ತಿದ್ದರೂ ಪೊಲೀಸರು ಮಾರ್ಗ ಮಧ್ಯೆ ಚಹಾ ಸೇವಿಸಲು ವಾಹನ ನಿಲುಗಡೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?