ನವದೆಹಲಿ: ದೇಶದ ಹಿತಾಸಕ್ತಿಗನುಗುಣವಾಹಿ ಸರ್ಕಾರ ರಫೇಲ್ ಒಪ್ಪಂದವನ್ನು ಮಾಡಿಕೊಂಡಿತ್ತು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ರಫೇಲ್ ಒಪ್ಪಂದ ಕುರಿತಂತೆ ಕಾಂಗ್ರೆಸ್ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತ ಮತ್ತು ಫ್ರಾನ್ಸ್ ನಡುವಿನ ರಫೇಲ್ ಒಪ್ಪಂದ ಕುರಿತು ಸಂಸತ್ತಿನಲ್ಲಿ ನಮ್ಮ ರಕ್ಷಣಾ ಸಚಿವರು ಸ್ಪಷ್ಟವಾಗಿ ಹೇಳಿಕೆ ನೀಡಿದ್ದಾರೆ. ವಿಚಾರವಲ್ಲದ ವಿಚಾರಗಳಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಧಾರರಹಿತ ಆರೋಪಿಗಳನ್ನು ಮಾಡುತ್ತಿದ್ದಾರೆಂದು ಹೇಳಿದ್ದಾರೆ.
ರಫೇಲ್ ಒಪ್ಪಂದ ಕುರಿತಂತೆ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಸಾಕ್ಷ್ಯಾಧಾರಗಳೊಂದಿಗೆ ಸಂಸತ್ತಿಗೆ ಬರಲಿ. ದೇಶದ ಹಿತಾಸಕ್ತಿಗಳಿಗೆ ಅನುಗುಣವಾಗಿ ಸರ್ಕಾರ ಈ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.