ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ ಪಿಗೆ ಗೌರವಾನ್ವಿತ ಸಂಖ್ಯೆಯಲ್ಲಿ ಸೀಟು ಹಂಚಿಕೆ ಮಾಡಿದರೇ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಬಿಎಸ್ ಪಿ ಸರ್ವೋಚ್ಚ ನಾಯಕಿ ಮಾಯಾವತಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮಾಯಾವತಿ, ಮಧ್ಯಪ್ರದೇಶ, ಛತ್ತೀಸ್ ಗಡ ಮತ್ತು ರಾಜಸ್ತಾನ ವಿಧಾನಸಭೆ ಚುನಾವಣೆಯಲ್ಲಿ ತಮಗೆ ಅಗತ್ಯ ಸಂಖ್ಯೆಯಲ್ಲಿ ಸೀಟು ಹಂಚಿಕೆ ಮಾಡಬೇಕು, ಹಾಗಿದ್ದಲ್ಲಿ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ಸಾಧ್ಯ ಎಂದು ಷರತ್ತು ವಿಧಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಎಸ್ ಪಿ ಜೊತೆ ಬಿಎಸ್ ಪಿ ಕೈ ಜೋಡಿಸಿತ್ತು ಎಂದು ಮಾಯಾವತಿ ಹೇಳಿದ್ದಾರೆ.
ಇನ್ನೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಾಯಾವತಿ ಆಲ್ವಾರ್ ಸಾಮೂಹಿಕ ಹಲ್ಲೆ ಪ್ರಕರ ಸಂಬಂಧ ಕಿಡಿ ಕಾರಿದ್ದಾರೆ, ಬಿಜೆಪಿ ಸದಸ್ಯರು ಹಾಗೂ ಬೆಂಬಲಿಗರಿಂದ ಇಂಥ ಕೃತ್ಯ ನಡೆದಿದೆ, ನಾನು ಇದನ್ನು ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ. ಮುಗ್ದ ಜನರು ಬಲಿಯಾಗುತ್ತಿದ್ದಾರೆ, ಕೊಲೆ ಮಡಲು ಸರ್ಕಾರ ಸ್ವಾತಂತ್ಯ್ರ ನೀಡಿದೆ, ಇದರಿಂದ ಪ್ರಜಾಪ್ರಭುತ್ವಕ್ಕೆ ಹಾನಿಯಾಗುತ್ತಿದ್ದು, ದೇಶದ ಜನ ಭಯದಲ್ಲಿ ಬದುಕುವಂತ ವಾತಾವರಣ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos