ಆಳ್ವಾರ್ ಸಾಮೂಹಿಕ ಹಲ್ಲೆ: ಆಘಾತ, ಗಂಭೀರ ಗಾಯಗಳಿಂದ ಸಂತ್ರಸ್ತನ ಸಾವು; ಮರಣೋತ್ತರ ವರದಿ 
ದೇಶ

ಆಳ್ವಾರ್ ಸಾಮೂಹಿಕ ಹಲ್ಲೆ: ಆಘಾತ, ಗಂಭೀರ ಗಾಯಗಳಿಂದ ಸಂತ್ರಸ್ತನ ಸಾವು; ಮರಣೋತ್ತರ ವರದಿ

ಆಳ್ವಾರ್ ಸಾಮೂಹಿಕ ಹಲ್ಲೆ ಪ್ರಕರಣದ ಸಂತ್ರಸ್ತ ವ್ಯಕ್ತಿ ಆಘಾತ ಹಾಗೂ ಗಂಭೀರ ಗಾಯಗಳಿಂದ ಮೃತಪಟ್ಟಿದ್ದಾನೆಂದು ಮರಣೋತ್ತರ ವರದಿಗಳಿಂದ ಮಂಗಳವಾರ ತಿಳಿದುಬಂದಿದೆ...

ಜೈಪುರ: ಆಳ್ವಾರ್ ಸಾಮೂಹಿಕ ಹಲ್ಲೆ ಪ್ರಕರಣದ ಸಂತ್ರಸ್ತ ವ್ಯಕ್ತಿ ಆಘಾತ ಹಾಗೂ ಗಂಭೀರ ಗಾಯಗಳಿಂದ ಮೃತಪಟ್ಟಿದ್ದಾನೆಂದು ಮರಣೋತ್ತರ ವರದಿಗಳಿಂದ ಮಂಗಳವಾರ ತಿಳಿದುಬಂದಿದೆ. 
ರಾಜಸ್ಥಾನದ ಆಳ್ವಾರ್ ಜಿಲ್ಲೆಯಲ್ಲಿ ಕಲೆದ ಶನಿವಾರ ರಕ್ಬರ್ ಖಾನ್ ಎಂಬ 28 ವರ್ಷದ ವಯಸ್ಸಿನ ಯುವಕನ ಮೇಲೆ ಸಾಮೂಹಿಕ ಹಲ್ಲೆ ನಡೆದಿತ್ತು. 
ಹಲ್ಲೆಗೊಳಗಾಗಿದ್ದ ವ್ಯಕ್ತಿ ರಕ್ಭರ್ ಖಾನ್ ಅವರು ಆಘಾತ ಹಾಗೂ ಗಂಭೀರ ಗಾಯಗಳಿಂದ ಸಾವನ್ನಪ್ಪಿದ್ದಾರೆಂದು ಮರಣೋತ್ತರ ವರದಿಗಳಲ್ಲಿ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜಸ್ಥಾನ ಡಿಜಿಪಿ ಒಪಿ.ಗಲ್ಹೋತ್ರಾ ಅವರು, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದರು. 
ಪರಿಸ್ಥಿತಿ ಹಾಗೂ ಪ್ರಕರಣಗಳಿಗೆ ಆದ್ಯತೆ ನೀಡುವಲ್ಲಿ ಕೆಲ ದೋಷಗಳಾಗಿವೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ ಎಂದು ವಿಶೇಷ ಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎನ್.ಆರ್.ಕೆ. ರೆಡ್ಡಿಯವರು ಹೇಳಿದ್ದಾರೆ. 
ಇದಲ್ಲದೆ ಪ್ರಕರಣದಲ್ಲಿ ರಾಜಕೀಯ ಗಣ್ಯ ವ್ಯಕ್ತಿಯೊಬ್ಬರ ಹೆಸರೂ ಕೂಡ ಕೇಳಿ ಬಂದಿದೆ. ಹಲ್ಲೆ ವೇಳೆ ದಾಳಿಕೋರರು ಬಿಜೆಪಿ ಶಾಸಕರೊಬ್ಬರ ಕುರಿತಂತೆ ಮಾತನಾಡುತ್ತಿದ್ದರು, ಬಿಜೆಪಿ ಶಾಸಕ ನಮ್ಮೊಂದಿಗಿದ್ದು, ನಮ್ಮನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಸಾಕ್ಷ್ಯ ನುಡಿದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT