ಆಳ್ವಾರ್ ಸಾಮೂಹಿಕ ಹಲ್ಲೆ: ಆಘಾತ, ಗಂಭೀರ ಗಾಯಗಳಿಂದ ಸಂತ್ರಸ್ತನ ಸಾವು; ಮರಣೋತ್ತರ ವರದಿ 
ದೇಶ

ಆಳ್ವಾರ್ ಸಾಮೂಹಿಕ ಹಲ್ಲೆ: ಆಘಾತ, ಗಂಭೀರ ಗಾಯಗಳಿಂದ ಸಂತ್ರಸ್ತನ ಸಾವು; ಮರಣೋತ್ತರ ವರದಿ

ಆಳ್ವಾರ್ ಸಾಮೂಹಿಕ ಹಲ್ಲೆ ಪ್ರಕರಣದ ಸಂತ್ರಸ್ತ ವ್ಯಕ್ತಿ ಆಘಾತ ಹಾಗೂ ಗಂಭೀರ ಗಾಯಗಳಿಂದ ಮೃತಪಟ್ಟಿದ್ದಾನೆಂದು ಮರಣೋತ್ತರ ವರದಿಗಳಿಂದ ಮಂಗಳವಾರ ತಿಳಿದುಬಂದಿದೆ...

ಜೈಪುರ: ಆಳ್ವಾರ್ ಸಾಮೂಹಿಕ ಹಲ್ಲೆ ಪ್ರಕರಣದ ಸಂತ್ರಸ್ತ ವ್ಯಕ್ತಿ ಆಘಾತ ಹಾಗೂ ಗಂಭೀರ ಗಾಯಗಳಿಂದ ಮೃತಪಟ್ಟಿದ್ದಾನೆಂದು ಮರಣೋತ್ತರ ವರದಿಗಳಿಂದ ಮಂಗಳವಾರ ತಿಳಿದುಬಂದಿದೆ. 
ರಾಜಸ್ಥಾನದ ಆಳ್ವಾರ್ ಜಿಲ್ಲೆಯಲ್ಲಿ ಕಲೆದ ಶನಿವಾರ ರಕ್ಬರ್ ಖಾನ್ ಎಂಬ 28 ವರ್ಷದ ವಯಸ್ಸಿನ ಯುವಕನ ಮೇಲೆ ಸಾಮೂಹಿಕ ಹಲ್ಲೆ ನಡೆದಿತ್ತು. 
ಹಲ್ಲೆಗೊಳಗಾಗಿದ್ದ ವ್ಯಕ್ತಿ ರಕ್ಭರ್ ಖಾನ್ ಅವರು ಆಘಾತ ಹಾಗೂ ಗಂಭೀರ ಗಾಯಗಳಿಂದ ಸಾವನ್ನಪ್ಪಿದ್ದಾರೆಂದು ಮರಣೋತ್ತರ ವರದಿಗಳಲ್ಲಿ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜಸ್ಥಾನ ಡಿಜಿಪಿ ಒಪಿ.ಗಲ್ಹೋತ್ರಾ ಅವರು, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದರು. 
ಪರಿಸ್ಥಿತಿ ಹಾಗೂ ಪ್ರಕರಣಗಳಿಗೆ ಆದ್ಯತೆ ನೀಡುವಲ್ಲಿ ಕೆಲ ದೋಷಗಳಾಗಿವೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ ಎಂದು ವಿಶೇಷ ಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎನ್.ಆರ್.ಕೆ. ರೆಡ್ಡಿಯವರು ಹೇಳಿದ್ದಾರೆ. 
ಇದಲ್ಲದೆ ಪ್ರಕರಣದಲ್ಲಿ ರಾಜಕೀಯ ಗಣ್ಯ ವ್ಯಕ್ತಿಯೊಬ್ಬರ ಹೆಸರೂ ಕೂಡ ಕೇಳಿ ಬಂದಿದೆ. ಹಲ್ಲೆ ವೇಳೆ ದಾಳಿಕೋರರು ಬಿಜೆಪಿ ಶಾಸಕರೊಬ್ಬರ ಕುರಿತಂತೆ ಮಾತನಾಡುತ್ತಿದ್ದರು, ಬಿಜೆಪಿ ಶಾಸಕ ನಮ್ಮೊಂದಿಗಿದ್ದು, ನಮ್ಮನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಸಾಕ್ಷ್ಯ ನುಡಿದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT