ರಾಜನಾಥ್ ಸಿಂಗ್ 
ದೇಶ

1984 ರಲ್ಲಿ ಅತಿದೊಡ್ಡ ಸಾಮೂಹಿಕ ಹಲ್ಲೆಗಳು ಸಂಭವಿಸಿದ್ದವು -ರಾಜನಾಥ ಸಿಂಗ್

1984ರ ಸಿಖ್ ವಿರುದ್ಧದ ಹಿಂಸಾಚಾರದ ಸಂದರ್ಭದಲ್ಲಿ ದೊಡ್ಡ ಸಾಮೂಹಿಕ ಹಲ್ಲೆಗಳು ಸಂಭವಿಸಿದ್ದವು. ಈ ಬಗ್ಗೆ ನಾವು ಆತಂಕಗೊಂಡಿದ್ದೇವೆ ಎಂದು ರಾಜನಾಥ್ ಸಿಂಗ್ ಲೋಕಸಭೆಯಲ್ಲಿಂದು ಹೇಳಿದ್ದಾರೆ

ನವದೆಹಲಿ: ರಾಜಸ್ತಾನ ಆಳ್ವಾರ್ ಜಿಲ್ಲೆಯಲ್ಲಿ ಗೋವು ಕಳ್ಳನೆಂದು ಬಾವಿಸಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ನಡೆದ ಸಾಮೂಹಿಕ ಹಲ್ಲೆ ಪ್ರಕರಣ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿಂದು ಪ್ರತಿಧ್ವನಿಸಿತ್ತು.

ಸರ್ಕಾರ ಸಾಮೂಹಿಕ ಹಲ್ಲೆಗೆ ಬೆಂಬಲಿಸುತ್ತಿದೆ. ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಪ್ರತಿಪಕ್ಷಗಳು ಲೋಕಸಭೆಯಲ್ಲಿ ಆರೋಪಿಸಿದವು.ಈ ಕುರಿತು ಕೇಂದ್ರ ಗೃಹ ಸಚಿವ  ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಬೇಕೆಂದು ಆಗ್ರಹಿಸಿದವು.

ಈ ಸಂದರ್ಭ ಮಾತನಾಡಿದ ರಾಜನಾಥ್ ಸಿಂಗ್,  ಸಾಮೂಹಿಕ ಹಲ್ಲೆ  ಪ್ರಕರಣಗಳ ತನಿಖೆಗಾಗಿ  ಉನ್ನತ ಮಟ್ಟದ ತಂಡವನ್ನು  ರಚಿಸಲಾಗಿದೆ. ಒಂದು ವೇಳೆ ಅಗತ್ಯವಾದಲ್ಲೀ ಸಾಮೂಹಿಕ ಹಲ್ಲೆ ವಿರುದ್ಧದ ಕಾನೂನು ಜಾರಿಗೆ ಗಮನ ಹರಿಸಲಾಗುವುದು ಎಂದರು.

 ಇಂತಹ ಸಾಮೂಹಿಕ ಹಲ್ಲೆಗಳು ಇತ್ತೀಚಿಗೆ ಸಂಭವಿಸುತ್ತಿಲ್ಲ. ಹಲವು ವರ್ಷಗಳಿಂದಲೂ ನಡೆಯುತ್ತಾ ಬಂದಿದೆ. 1984ರ ಸಿಖ್ ವಿರುದ್ಧದ ಹಿಂಸಾಚಾರದ ಸಂದರ್ಭದಲ್ಲಿ ದೊಡ್ಡ ಸಾಮೂಹಿಕ ಹಲ್ಲೆಗಳು ಸಂಭವಿಸಿದ್ದವು. ಈ  ಬಗ್ಗೆ ನಾವು ಆತಂಕಗೊಂಡಿದ್ದೇವೆ ಎಂದು ರಾಜನಾಥ್ ಸಿಂಗ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT