ರಾಹುಲ್ ಗಾಂಧಿ - ತೇಜಸ್ವಿ ಯಾದವ್ 
ದೇಶ

ಪ್ರಧಾನಿ ರೇಸ್ ನಲ್ಲಿ ರಾಹುಲ್ ಮಾತ್ರವಲ್ಲ, ಬೇರೆಯವರೂ ಇದ್ದಾರೆ: ತೇಜಸ್ವಿ ಯಾದವ್

ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ರೇಸ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ಮಾತ್ರವಲ್ಲದೆ ಇತರೆ ನಾಯಕರು....

ಪಾಟ್ನಾ: ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ರೇಸ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ಮಾತ್ರವಲ್ಲದೆ ಇತರೆ ನಾಯಕರು ರೇಸ್ ನಲ್ಲಿದ್ದಾರೆ ಎಂದು ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಆರ್ ​ಜೆಡಿ ಮುಖಂಡ ತೇಜಸ್ವಿ ಯಾದವ್ ಅವರು ಮಂಗಳವಾರ​ ಹೇಳಿದ್ದಾರೆ.
ಪ್ರತಿಪಕ್ಷಗಳೆಲ್ಲವೂ ಒಂದೆಡೆ ಕುಳಿತು ತಮ್ಮ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲಿವೆ. ಪ್ರಧಾನಿ ಅಭ್ಯರ್ಥಿಯ ರೇಸ್ ​ನಲ್ಲಿ ರಾಹುಲ್​ ಗಾಂಧಿ ಮಾತ್ರವಲ್ಲ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​, ಬಿಎಸ್​ ಸಿಪಿ ನಾಯಕಿ ಮಾಯಾವತಿ ಅವರೂ ಇದ್ದಾರೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.
ಇದೇ ವೇಳೆ, ಮೈತ್ರಿ ಕೂಟದಿಂದ ಯಾರೇ ಪ್ರಧಾನಮಂತ್ರಿ ಅಭ್ಯರ್ಥಿಯಾದರೂ ಅವರಿಗೆ ಆರ್ ​ಜೆಡಿಯ ಸಂಪೂರ್ಣ ಬೆಂಬಲ ಇರಲಿದೆ ಎಂದು ತೇಜಸ್ವಿ ಸ್ಪಷ್ಟಪಡಿಸಿದ್ದಾರೆ.
ಸಂವಿಧಾನವನ್ನು ರಕ್ಷಣೆ ಮಾಡುವ ನಾಯಕನನ್ನು ಬೆಂಬಲಿಸುವುದು ನಮ್ಮ ಉದ್ದೇಶವಾಗಿದೆ. ಅದು ರಾಹುಲ್​ ಗಾಂಧಿ ಅವರೂ ಆಗಿರಬಹುದು. ಆದರೆ, ರಾಹುಲ್​ ಗಾಂಧಿ ಅವರು ಬಿಜೆಪಿಯೇತರ ಪಕ್ಷಗಳನ್ನು ಸಂಘಟಿಸಿ, ಮಹಾಮೈತ್ರಿ ಕೂಟದ ವೇದಿಕೆಗೆ ಕರೆತರಬೇಕಿದೆ ಎಂದು ತೇಜಸ್ವಿ ಹೇಳಿದ್ದಾರೆ.
ಆರ್ ಜೆಡಿ ಕಾಂಗ್ರೆಸ್ ನ ಪ್ರಮುಖ ಮಿತ್ರ ಪಕ್ಷವಾಗಿದ್ದು, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ತೇಜಸ್ವಿ ಯಾದವ್ ಅವರು ಸದಾ ರಾಹುಲ್ ಗಾಂಧಿಯನ್ನು ಬೆಂಬಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘಕಾಲ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT