ಆಳ್ವಾರ್ ಸಾಮೂಹಿಕ ಹಲ್ಲೆ; ಬಿಜೆಪಿ ಶಾಸಕ ನಮ್ಮೊಂದಿಗಿದ್ದಾರೆ, ನಮ್ಮನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದ ದಾಳಿಕೋರರು 
ದೇಶ

ಆಳ್ವಾರ್: ಬಿಜೆಪಿ ಶಾಸಕ ನಮ್ಮೊಂದಿಗಿದ್ದಾರೆ, ನಮ್ಮನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದ ದಾಳಿಕೋರರು

ನಮ್ಮೊಂದಿಗೆ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ಅವರಿದ್ದು, ನಮ್ಮನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ ಹೀಗೆಂದು ದಾಳಿಕೋರರು ಮಾತನಾಡುತ್ತಿದ್ದರು ಎಂದು ಆಳ್ವಾರ್ ಸಾಮೂಹಿಕ ಹಲ್ಲೆ ಪ್ರಕರಣದ ಪ್ರತ್ಯಕ್ಷದರ್ಶಿ ಹೇಳಿದ್ದಾರೆ...

ಜೈಪುರ: ನಮ್ಮೊಂದಿಗೆ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ಅವರಿದ್ದು, ನಮ್ಮನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ ಹೀಗೆಂದು ದಾಳಿಕೋರರು ಮಾತನಾಡುತ್ತಿದ್ದರು ಎಂದು ಆಳ್ವಾರ್ ಸಾಮೂಹಿಕ ಹಲ್ಲೆ ಪ್ರಕರಣದ ಪ್ರತ್ಯಕ್ಷದರ್ಶಿ ಹೇಳಿದ್ದಾರೆ. 
ರಾಜಸ್ಥಾನದ ಆಳ್ವಾರ್ ಜಿಲ್ಲೆಯಲ್ಲಿ ಕಳೆದ ಶನಿವಾರ ರಕ್ಬರ್ ಖಾನ್ ಎಂಬ 28 ವರ್ಷ ವಯಸ್ಸಿನ ಯುವಕನ ಮೇಲೆ ಗುಂಪೊಂದು ಸಾಮೂಹಿಕ ಹಲ್ಲೆ ನಡೆಸಿತ್ತು. 
ಅಸ್ಲಾಂ ಎಂಬ ಪ್ರತ್ಯಕ್ಷದರ್ಶಿಯ ಹೇಳಿಕೆಯನ್ನು ಹರಿಯಾಣದ ನೂಹ್ ಜಿಲ್ಲೆ ಕೊಲ್ಗಾಂವ್ ಎಂಬ ಗ್ರಾಮದಲ್ಲಿ ದಾಖಲು ಮಾಡಿಕೊಳ್ಳಲಾಗಿದೆ. 
ಆಳ್ವಾರ್'ನ ಖಾನ್ಪುರದಲ್ಲಿ 2 ಹಸುಗಳನ್ನು ಖರೀದಿ ಮಾಡಿದ ಬಳಿಕ ನಾನು ಮತ್ತು ರಕ್ಬರ್ ಹಸುಗಳನ್ನು ಕರೆದುಕೊಂಡು ಕಾಲ್ನಡಿಗೆ ಮೂಲಕ ಗ್ರಾಮಕ್ಕೆ ಹೋಗುತ್ತಿದ್ದೆವು. 
ಈ ವೇಳೆ ವಿರುದ್ಧ ದಿಕ್ಕಿನಲ್ಲಿ ದ್ವಿಚಕ್ರ ವಾಹನವೊಂದು ಬಂದಿತ್ತು. ವಾಹನ ಬರುತ್ತಿದ್ದುದ್ದನ್ನು ಕಂಡ ಹಸುಗಳು ಹತ್ತಿರದಲ್ಲಿದ್ದ ಹೊಲಕ್ಕೆ ಇಳಿದು ಓಡಲು ಆರಂಭಿಸಿದವು. ರಕ್ಬರ್ ಮತ್ತು ನಾನು ಹಸುಗಳನ್ನು ಹಿಡಿಯಲು ಮುಂದಾಗಿದ್ದೆವು. ಈ ವೇಳೆ 7 ಮಂದಿ ಲಾಠಿ ಹಿಡಿದು ನಮ್ಮ ಸುತ್ತ ನಿಂತರು. ಅದೃಷ್ಟವಶಾತ್ ನಾನು ಸ್ಥಳದಿಂದ ತಪ್ಪಿಸಿಕೊಂಡೆ. ಆದರೆ, ರಕ್ಬರ್ ಮೇಲೆ ಆ ಗುಂಪು ಲಾಠಿಗಳಿಂದ ಹೊಡೆಯಲು ಆರಂಭಿಸಿದ್ದರು ಎಂದು ಹೇಳಿದ್ದಾರೆ. 
ಹಲ್ಲೆ ನಡೆಸುತ್ತಿದ್ದ ವೇಳೆ ಗುಂಪು ಒಬ್ಬರ ಹೆಸರನ್ನು ಒಬ್ಬರು ಹೇಳುತ್ತಿದ್ದರು. 7 ಮಂದಿಯ ಪೈಕಿ ವಿಜಯ್, ಧರ್ಮೇಂದ್ರ, ಪರಮ್ಜೀತ್, ನರೇಶ್ ಮತ್ತು ಸುರೇಶ್ ಎಂಬಐವರ ಹೆಸರುಗಳು ನೆನಪಿನಲ್ಲಿವೆ. ಹಲ್ಲೆ ನಡೆಸುತ್ತಿದ್ದ ವೇಳೆ ಗುಂಪು ಬಿಜೆಪಿ ಶಾಸಕರೊಬ್ಬರ ಹೆಸರನ್ನೂ ಹೇಳುತ್ತಿದ್ದರು. ನಮಗೆ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ಅವರ ಬೆಂಬಲವಿದ್ದು, ನಮ್ಮನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ ಎಂದು ಹೇಳಿದ್ದರು ಎಂದು ಅಸ್ಲಾಮ್ ಅವರು ತಿಳಿಸಿದ್ದಾರೆ. 
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜಸ್ಥಾನ ಡಿಜಿಪಿ ಒಪಿ.ಗಲ್ಹೋತ್ರಾ ಅವರು, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. 
ಘಟನೆಯ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಗೃಹ ಸಚಿವ ಗುಲಾಬ್ ಚಂದ್ ಕಟಾರಿಯಾ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT