ದೇಶ

ಉಗ್ರರ ಸಂಚು ವಿಫಲ, ನೋಯ್ಡಾದಲ್ಲಿ ಬಾಂಗ್ಲಾ ಮೂಲದ ಇಬ್ಬರು ಭಯೋತ್ಪಾದಕರ ಬಂಧನ

Srinivasamurthy VN
ನೋಯ್ಡಾ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಉತ್ತರ ಪ್ರದೇಶದ ನೋಯ್ಡಾದಲ್ಲಿ ಬಂಧಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ನೊಯ್ಡಾದ ಜನವಸತಿ ಪ್ರದೇಶದಲ್ಲಿ ಅವಿತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಹಾಗು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಇಬ್ಬರೂ ಶಂಕಿತ ಉಗ್ರರು ಬಾಂಗ್ಲಾದೇಶ ಮೂಲದವರೆಂದು ತಿಳಿದುಬಂದಿದ್ದು, ಉಗ್ರರನ್ನು ಮುಷರಫ್ ಹುಸೇನ್‌ ಹಾಗೂ ರುಬೆಲ್‌ ಅಹಮದ್ ಎಂದು ಗುರುತಿಸಲಾಗಿದೆ. 
ಪೊಲೀಸ್ ಮೂಲಗಳ ಪ್ರಕಾರ ಆಗಸ್ಟ್ 15ರಂದು ದೇಶದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಆಚರಿಸುವ ಹಿನ್ನಲೆಯಲ್ಲಿ ಇವರು ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದರು ಎನ್ನಲಾಗಿದೆ. 
ಈಗಾಗಲೇ ಜೈಶ್ ಇ ಮೊಹಮದ್ ಸೇರಿದಂತೆ ಕೆಲ ಉಗ್ರ ಸಂಘಟನೆಗಳು ದಾಳಿ ನಡೆಸುವ ಕುರಿತು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರಮುಖವಾಗಿ ರಾಜಧಾನಿ ದೆಹಲಿ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ದೆಹಲಿ ಸುತ್ತಮುತ್ತಲ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
SCROLL FOR NEXT