ಕೋರ್ಟ್ ತೀರ್ಪಿನ ಬಳಿಕ ಉದಯಕುಮಾರ್ ತಾಯಿ ಕಣ್ಮೀರಿಟ್ಟಿದ್ದು ಹೀಗೆ 
ದೇಶ

ಉದಯಕುಮಾರ್ ಲಾಕಪ್ ಡೆತ್; 6 ಪೊಲೀಸರು ತಪ್ಪಿತಸ್ಥರು: ಸಿಬಿಐ ಕೋರ್ಟ್

ಉದಯಕುಮಾರ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಪೊಲೀಸರು ತಪ್ಪಿತಸ್ಥರು ಎಂದು...

ತಿರುವನಂತಪುರ: ಉದಯಕುಮಾರ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಪೊಲೀಸರು ತಪ್ಪಿತಸ್ಥರು ಎಂದು ಸಿಬಿಐ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.
2005ರಲ್ಲಿ ಕಳ್ಳತನದ ಆರೋಪದ ಮೇಲೆ 27 ವರ್ಷದ ಉದಯಕುಮಾರ್ ನನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಪೊಲೀಸ್ ವಿಚಾರಣೆ ವೇಳೆಯೇ ಆರೋಪಿ ಮೃತಪಟ್ಟಿದ್ದರು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಜೆ ನಸ್ಸೆರ್ ಅವರು, ಆರು ಪೊಲೀಸರು ತಪ್ಪಿತಸ್ಥರು ಎಂದು ತೀರ್ಪು ನೀಡಿದ್ದಾರೆ. ಅಲ್ಲದೆ ಒಂದೆರಡು ದಿನದಲ್ಲಿ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿದ್ದಾರೆ.
ಫೋರ್ಟ್ ಮಾಜಿ ಸಹಾಯಕ ಆಯುಕ್ತ ಟೆಕಿ ಹರಿದಾಸ್, ಮಾಜಿ ಸರ್ಕಲ್ ಇನ್ಸ್ ಪೆಕ್ಟರ್ ಇಕೆ ಸಾಬು, ಮಾಜಿ ಸಬ್ ಇನ್ಸ್ ಪೆಕ್ಟ್ರರ್ ಅಜಿತ್ ಕುಮಾರ್ ಹಾಗೂ ಪೊಲೀಸ್ ಪೇದೆಗಳಾದ ಕೆ ಜಿತಕುಮಾರ್ ಮತ್ತು ಎಸ್ ವಿ ಶ್ರೀಕುಮಾರ್ ತಪ್ಪಿತಸ್ಥರು ಎಂದು ಕೋರ್ಟ್ ತೀರ್ಪು ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT