ಉತ್ತರಪ್ರದೇಶ ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ ವಾಸೀಮ್ ರಿಜ್ವಿ 
ದೇಶ

ಗೋಮಾಂಸ ಸೇವನೆ ನಿಲ್ಲಿಸಿ; ಆರ್'ಎಸ್ಎಸ್ ನಾಯಕನ ಹೇಳಿಕೆಗೆ ಶಿಯಾ ವಕ್ಫ್ ಮಂಡಳಿ ಬೆಂಬಲ

ಸಾಮೂಹಿಕ ಹಲ್ಲೆಯಂತಹ ಘಟನೆಗಳು ನಿಲ್ಲಬೇಕಿದ್ದರೆ, ಜನರು ಗೋಮಾಂಸ ಸೇವನೆಯನ್ನು ನಿಲ್ಲಿಸಬೇಕೆಂದು ಹೇಳಿದ್ದ ಆರ್'ಎಸ್ಎಸ್ ನಾಯಕನ ಹೇಳಿಕೆಗೆ ಶಿಯಾ ವಕ್ಫ್ ಮಂಡಳಿ ಮಂಗಳವಾರ ಬೆಂಬಲ ನೀಡಿದೆ...

ನವದೆಹಲಿ: ಸಾಮೂಹಿಕ ಹಲ್ಲೆಯಂತಹ ಘಟನೆಗಳು ನಿಲ್ಲಬೇಕಿದ್ದರೆ, ಜನರು ಗೋಮಾಂಸ ಸೇವನೆಯನ್ನು ನಿಲ್ಲಿಸಬೇಕೆಂದು ಹೇಳಿದ್ದ ಆರ್'ಎಸ್ಎಸ್ ನಾಯಕನ ಹೇಳಿಕೆಗೆ ಶಿಯಾ ವಕ್ಫ್ ಮಂಡಳಿ ಮಂಗಳವಾರ ಬೆಂಬಲ ನೀಡಿದೆ. 
ಆರ್'ಎಸ್ಎಸ್ ನಾಯಕ ಇಂದ್ರೇಶ್ ಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶ ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ ವಾಸೀಮ್ ರಿಜ್ವಿಯವರು, ಗೋಮಾಂಸ ಸೇವನೆ ಇಸ್ಲಾಂನಲ್ಲಿ ಪಾಪದ ಕರ್ಮವಾಗಿದ್ದು, ಮುಸ್ಲಿಮರು ಗೋಮಾಂಸ ಸೇವನೆ ನಿಲ್ಲಿಸಬೇಕೆಂದು ಹೇಳಿದ್ದಾರೆ. 
ಇಂದ್ರೇಶ್ ಕುಮಾರ್ ಅವರ ಹೇಳಿಕೆಯಲ್ಲೂ ಒಂದು ಅಂಶವಿದೆ. ಧಾರ್ಮಿಕ ಭಾವನೆಗಳಿಗೆ ನೋವು ಮಾಡುವ ಕೆಲಸವನ್ನು ಯಾರೂ ಮಾಡಬಾರದು. ಗೋ ಹತ್ಯೆಗೆ ಕಾನೂನು ರೂಪಿಸಿದ್ದೇ ಆದರೆ, ಸಾಮೂಹಿಕ ಹಲ್ಲೆ ಪ್ರಕರಣಗಳು ನಿಲ್ಲುತ್ತವೆ. ಒಂದು ಸಮುದಾಯದ ಗೋವುಗಳಿಗೆ ತಾಯಿಯ ಸ್ಥಾನಮಾನವನ್ನು ನೀಡಿದ್ದು, ಅಂತಹ ಗೋವನ್ನು ಹತ್ಯೆ ಮಾಡಬಾರದು ಎಂದು ಹೇಳಿದ್ದಾರೆ. 
ಮುಸ್ಲಿಮರು ಗೋವು ಹತ್ಯೆ ಮಾಡುವುದು ಮತ್ತು ಗೋಮಾಂಸ ಸೇವನೆ ಮಾಡುವುದನ್ನು ನಿಲ್ಲಿಸಬೇಕು. ಗೋಮಾಂಸ ಸೇವನೆ ಇಸ್ಲಾಂ ಧರ್ಮದಲ್ಲಿ ಪಾಪವೆಂದು ಹೇಳಲಾಗುತ್ತದೆ. ಸಾಮೂಹಿಕ ಹಲ್ಲೆ ಪ್ರಕರಣಗಳನ್ನು ನಿಲ್ಲಿಸಲು ಸಾಧ್ಯವಾಗುವುದಿಲ್ಲ. ಪ್ರತೀ ಪ್ರದೇಶದಲ್ಲಿಯೂ ಭದ್ರತೆ ನೀಡಲೂ ಸಾಧ್ಯವಿಲ್ಲ. ಗೋವುಗಳ ಹತ್ಯೆಗೆ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತರಬೇಕಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT