ದೆಹಲಿ: ಮಾನವ ಕಳ್ಳಸಾಗಣೆ ವಿರುದ್ಧ ಭರ್ಜರಿ ಕಾರ್ಯಾಚರಣೆ, 16 ಯುವತಿಯರ ರಕ್ಷಣೆ 
ದೇಶ

ದೆಹಲಿ: ಮಾನವ ಕಳ್ಳಸಾಗಣೆ ವಿರುದ್ಧ ಭರ್ಜರಿ ಕಾರ್ಯಾಚರಣೆ, 16 ಯುವತಿಯರ ರಕ್ಷಣೆ

ಮಾನವ ಕಳ್ಳಸಾದನೆ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ದೆಹಲಿ ಮಹಿಳಾ ಆಯೋಗ 16 ಯುವತಿಯರನ್ನು ಮುನಿರ್ಕಾರ ಎಂಬ ಪ್ರದೇಶದಲ್ಲಿ ರಕ್ಷಣೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ...

ನವದೆಹಲಿ: ಮಾನವ ಕಳ್ಳಸಾದನೆ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ದೆಹಲಿ ಮಹಿಳಾ ಆಯೋಗ 16 ಯುವತಿಯರನ್ನು ಮುನಿರ್ಕಾರ ಎಂಬ ಪ್ರದೇಶದಲ್ಲಿ ರಕ್ಷಣೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 
ಯುವತಿಯನ್ನು ಇರಾನ್ ಮತ್ತು ಕುವೈತ್'ಗೆ ಇಂದು ಬೆಳಿಕ್ಕೆ ಸಾಗಣೆ ಮಾಡಲಾಗುತ್ತಿತ್ತು ಎಂದು ದೆಹಲಿ ಮಹಿಳಾ ಆಯೋಗ ಮುಖ್ಯಸ್ಥೆ ಸ್ವಾತಿ ಮಳಿವಾಳ್ ಅವರು ಹೇಳಿದ್ದಾರೆ. 
ಕೆಲಸ ಕೊಡಿಸುವುದಾಗಿ 16 ಯುವತಿಯರನ್ನು ನೇಪಾಳದಿಂದ ದೆಹಲಿಗೆ ಕರೆತರಲಾಗಿದ್ದು, ಯುವತಿಯರನ್ನು ಇರಾನ್ ಮತ್ತು ಕುವೈತ್'ಗೆ ಸಾಗಾಣೆ ಮಾಡಲಾಗುತ್ತಿದೆ ಎಂದು ಸರ್ಕಾರೇತರ ಸಂಸ್ಥೆ (ಎನ್'ಜಿಒ)ವೊಂದು ಮಾಹಿತಿ ನೀಡಿತ್ತು. ಈ ಮಾಹಿತಯನ್ನು ಆಧರಿಸಿ ಸ್ಥಳಕ್ಕೆ ಭೇಟಿ ನೀಡಿ 16 ಯುವತಿಯನ್ನು ರಕ್ಷಣೆ ಮಾಡಲಾಯಿತು. 7 ಯುವತಿಯರನ್ನು ಮೊದಲೇ ಸಾಗಣೆ ಮಾಡಿರುವ ಕುರಿತು ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ. 
ಮಾಹಿತಿ ತಿಳಿಯುತ್ತಿದ್ದಂತೆಯೇ ಮುನಿರ್ಕಾಗೆ ತಂಡದೊಂದಿಗೆ ಸ್ಥಳಕ್ಕೆ ಹೋಗಿದ್ದೆ. ದೆಹಲಿ ಪೊಲೀಸರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಬಳಿಕ ಯುವತಿಯರನ್ನು ರಕ್ಷಣೆ ಮಾಡಲಾಯಿತು. ಇರಾನ್ ಹಾಗೂ ಕುವೈತ್ ನಲ್ಲಿ ಕೆಲಸ ಕೊಡಿಸುವುದಾಗಿ ಏಜೆಂಟ್ ಒಬ್ಬರು ಹೇಳಿದ್ದರು ಎಂದು ಯುವತಿಯೊಬ್ಬಳು ಹೇಳಿದ್ದಾಳೆಂದು ಸ್ವಾತಿ ತಿಳಿಸಿದ್ದಾರೆ. 
ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮಧ್ಯಪ್ರವೇಶ ಮಾಡಿ, ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಬೇಕೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT