ಸಂಗ್ರಹ ಚಿತ್ರ 
ದೇಶ

ಹಸುಗಳ ತಂಟೆಗೆ ಹೋಗಬೇಡಿ: ಮುಸ್ಲಿಮರಿಗೆ ಎಸ್ ಪಿ ಮುಖಂಡ ಅಜಂಖಾನ್ ಸಲಹೆ

ದೇಶದಲ್ಲಿ ಗೋ ಸಂರಕ್ಷಣೆ ಹೆಸರಲ್ಲಿ ಅಮಾಯಕರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗಿರುವಂತೆಯೇ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಹಸುಗಳ ತಂಟೆಗೆ ಹೋಗದಂತೆ ಮುಸ್ಲಿಮರಿಗೆ ಸಲಹೆ ನೀಡಿದ್ದಾರೆ.

ರಾಮ್ ಪುರ: ದೇಶದಲ್ಲಿ ಗೋ ಸಂರಕ್ಷಣೆ ಹೆಸರಲ್ಲಿ ಅಮಾಯಕರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗಿರುವಂತೆಯೇ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಹಸುಗಳ ತಂಟೆಗೆ ಹೋಗದಂತೆ ಮುಸ್ಲಿಮರಿಗೆ ಸಲಹೆ ನೀಡಿದ್ದಾರೆ.
ಉತ್ತರ ಪ್ರದೇಶದ ರಾಮ್ ಪುರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅಜಂ ಖಾನ್, ಮುಸ್ಲಿಮರು ತಮ್ಮ ಮುಂದಿನ ತಲೆಮಾರುಗಳ ಸುರಕ್ಷತೆಗಾಗಿ ಹೈನುಗಾರಿಕೆ ಹಾಗು ಹಸು ಸಾಕಣೆಯಿಂದ ದೂರ ಉಳಿಯಬೇಕು ಎಂದು ಹೇಳಿದ್ದಾರೆ.
'ಹೈನೋದ್ಯಮ ಹಾಗೂ ಗೋವುಗಳ ವ್ಯಾಪಾರದಲ್ಲಿರುವ ಮುಸ್ಲಿಮರು, ತಮ್ಮ ಮುಂದಿನ ತಲೆಮಾರುಗಳ ಸುರಕ್ಷತೆಗಾಗಿ ಅದರಿಂದ ದೂರ ಉಳಿಯಬೇಕೆಂದು ಬೇಡಿಕೊಳ್ಳುತ್ತೇನೆ. ಹಸುವನ್ನು ಮುಟ್ಟಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೆಲ ರಾಜಕಾರಣಿಗಳು ಎಚ್ಚರಿಕೆ ಕೊಡುತ್ತಿರುವ ವೇಳೆ, ಇಂಥಹ ವ್ಯಾಪಾರಗಳಿಂದ ಮುಸ್ಲಿಮರು ದೂರ ಉಳಿಯಬೇಕು. ಇದು ಅವರ ಮುಂದಿನ ತಲೆಮಾರುಗಳಿಗೆ ಒಳ್ಳೆಯದು ಎಂದು ಹೇಳಿದ್ದಾರೆ.
ಇದೇ ಜುಲೈ 20ರ ರಾತ್ರಿ ಗೋವುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದಾನೆ ಎಂದು ಆರೋಪಿಸಿ ರಾಜಸ್ಥಾನದ ಆಳ್ವಾರ್ ನಲ್ಲಿ ರಕ್ಬರ್ ಖಾನ್ ಎಂಬಾತನನ್ನು ಗೋಸಂರಕ್ಷಕರ ಸೋಗಿನಲ್ಲಿದ್ದ ದುಷ್ಕರ್ಮಿಗಳು ಹೊಡೆದು ಕೊಂದು ಹಾಕಿದ್ದರು. ಈ ವಿಚಾರ ದೇಶಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿರುವ ಬೆನ್ನಲ್ಲೇ ಎಸ್ ಪಿ ಮುಖಂಡ ಅಜಂಖಾನ್ ಅವರ ಹೇಳಿಕೆ ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT