ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ 
ದೇಶ

ದೇಶ ಒಡೆಯಲು ಕೆಲ ಶಕ್ತಿಗಳು ಯತ್ನ ನಡೆಸುತ್ತಿವೆ: ರಾಜ್ಯವರ್ಧನ್ ರಾಥೋಡ್

ದೇಶದ ಒಳಗಿರುವ ಹಾಗೂ ಹೊರಗಿರುವ ಕೆಲ ಶಕ್ತಿಗಳು ಭಾರತವನ್ನು ಒಡೆಯಲು ಯತ್ನಗಳನ್ನು ನಡೆಸುತ್ತಿದೆ ಎಂದು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಬುಧವಾರ ಹೇಳಿದ್ದಾರೆ...

ನವದೆಹಲಿ: ದೇಶದ ಒಳಗಿರುವ ಹಾಗೂ ಹೊರಗಿರುವ ಕೆಲ ಶಕ್ತಿಗಳು ಭಾರತವನ್ನು ಒಡೆಯಲು ಯತ್ನಗಳನ್ನು ನಡೆಸುತ್ತಿದೆ ಎಂದು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಬುಧವಾರ ಹೇಳಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲ ದಿನಗಳ ಹಿಂದಷ್ಟೇ ಉಗ್ರರು ನಡೆಸಿದ್ದ ದಾಳಿಯಲ್ಲಿ ಸಿಆರ್'ಪಿಎಫ್ ಯೋಧ ಶಂಕರ್ ಲಾಲ್ ಬರಾಲಾ ಅವರು ಹುತಾತ್ಮರಾಗಿದ್ದರು. ಹುತಾತ್ಮ ಯೋಧನಿಗೆ ಇಂದು ಅಂತಿಮ ನಮನ ಸಲ್ಲಿಸಿದ ಬಳಿಕ ಪ್ರತಿಕ್ರಿಯೆ ನೀಡಿರುವ ರಾಜ್ಯವರ್ಧನ್ ರಾಥೋಡ್ ಅವರು, ದೇಶವನ್ನು ಒಡೆಯಲು ಕೆಲ ಶಕ್ತಿಗಳು ಯತ್ನ ನಡೆಸುತ್ತಿವೆ ಎಂದು ಹೇಳಿದ್ದಾರೆ. 
ಯೋಧರು ನಮ್ಮ ದೇಶವನ್ನು ರಕ್ಷಣೆ ಮಾಡುತ್ತಿದ್ದಾರೆ. ಸಿಆರ್'ಪಿಎಫ್ ಯೋಧರ ಧೈರ್ಯಕ್ಕೆ ಸೆಲ್ಯೂಟ್ ಹೊಡೆಯುತ್ತೇನೆ. ದೇಶವನ್ನು ಕಾಯಲು ಯೋಧರು ಸದಾಕಾಲ ಸಿದ್ಧರಿರುತ್ತಾರೆ. ದೇಶದ ಹೊರಗಿರುವ ಹಾಗೂ ಒಳಗಿರುವ ಕೆಲ ಶಕ್ತಿಗಳು ದೇಶವನ್ನು ಒಡೆಯಲು ಯತ್ನ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT