ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಆಹಾರವಿಲ್ಲದೆ ಹಸಿವಿನಿಂದ ಮೂವರು ಮಕ್ಕಳು ಸಾವು

ಆಹಾರವಿಲ್ಲದೆ ಹಸಿವಿನಿಂದ ಮೂವರು ಸಹೋದರಿಯರು ರಾಜಧಾನಿ ದೆಹಲಿಯಲ್ಲಿ ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ...

ನವದೆಹಲಿ: ಆಹಾರವಿಲ್ಲದೆ ಹಸಿವಿನಿಂದ ಮೂವರು ಸಹೋದರಿಯರು ರಾಜಧಾನಿ ದೆಹಲಿಯಲ್ಲಿ ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ. 
ಮಾನ್ಸಿ (8), ಶಿಖಾ (4), ಪರುಲ್ (2) ಮೃತಪಟ್ಟ ಸಹೋದರಿಯರಾಗಿದ್ದಾರೆ. ಪೂರ್ವ ದೆಹಲಿಯ ಮಂಡವಾಲಿ ಕೊಳಗೇರಿಯಲ್ಲಿರುವ ಮನೆಯೊಂದರಲ್ಲಿ ಮೃತದೇಹಗಳು ಪತ್ತೆಯಾಗಿವೆ. 
ಮರಣೋತ್ತರ ಪರೀಕ್ಷೆ ನಡೆಸಿರುವ ವೈದ್ಯರು, ಅಪೌಷ್ಟಿಕತೆ ಹಾಗೂ ಹಸಿವಿನಿಂದ ಸಾವನ್ನಪ್ಪಿದ್ದಾರೆಂದು ದೃಡಪಡಿಸಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಡಿಸಿಪಿ ಪಂಕಜ್ ಸಿಂಗ್ ಅವರು, ವೈದ್ಯಕೀಯ ಮಂಡಳಿ ಈಗಾಗಲೇ ತಂಡವೊಂದನ್ನು ರಚನೆ ಮಾಡಿದ್ದು, ಬಾಲಕಿಯರ ಸಾವಿಗೆ ನಿಜವಾದ ಕಾರಣವನ್ನು ಪತ್ತೆಹಚ್ಚಲು ಮರು ಮರಣೋತ್ತರ ಪರೀಕ್ಷೆ ನಡೆಸಲಿದೆ ಎಂದು ಹೇಳಿದ್ದಾರೆ. 
ಬಾಲಕಿಯರ ತಾಯಿ ಮಾನಸಿಕ ರೋಗದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಇನ್ನು ಬಾಲಕಿಯರ ತಂದೆ ಮಂಗಲ್ ಕೆಲ ಅರಸಿಕೊಂಡು ಹೊರಗೆ ಹೋಗಿದ್ದು, 2 ದಿನಗಳಾದರೂ ಮನೆಗೆ ಹಿಂತಿರುಗಿಲ್ಲ ಎನ್ನಲಾಗುತ್ತಿದೆ. 
ಬಾಡಿಗೆ ಕಟ್ಟದ ಹಿನ್ನಲೆಯಲ್ಲಿ ಮನೆಯ ಮಾಲೀಕರು ಕುಟುಂಬವನ್ನು ಕೆಲ ದಿನಗಳ ಹಿಂದಷ್ಟೇ ಹೊರಗೆ ಹಾಕಿದ್ದರು. ನಂತರ ಕೆಲ ಸ್ಥಳೀಯರು ಇವರಿಗೆ ಸ್ಥಳ ನೀಡಿದ್ದರು. 
ಮಂಗಲ್ ಕೂಲಿ ಕಾರ್ಮಿಕನಾಗಿ ಕೆಲ ಮಾಡುತ್ತಿದ್ದ. ಸೈಕಲ್ ರಿಕ್ಷಾ ಎಳೆಯುವ ಕೆಲಸ ಮಾಡುತ್ತಿದ್ದ. ಈ ಸೈಕಲ್ ರಿಕ್ಷಾವನ್ನು ಕೂಡ ಮನೆಯ ಮಾಲೀಕರೇ ನೀಡಿದ್ದರು. ಕೆಲ ದಿನಗಳ ಹಿಂದಷ್ಟೇ ದುಷ್ಕರ್ಮಿಗಳು ರಿಕ್ಷಾವನ್ನು ಕಳ್ಳತನ ಮಾಡಿದ್ದರು. ಮನೆಯ ಬಾಡಿಗೆಯನ್ನೂ ಕಟ್ಟದೆ, ಕಳೆದು ಹೋದ ಸೈಕಲ್ ರಿಕ್ಷಾದ ಹಣವನ್ನು ನೀಡದ ಕಾರಣ ಮಾಲೀಕರು ಮಂಗಲ್ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡು ಮನೆಯಿಂದ ಹೊರಗೆ ಹಾಕಿದ್ದರು. 
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್ ಗಳು 16 ವರ್ಷ ಬಳಿಕ ಡೆಲಿವರಿ, ಬೇಸ್ತು ಬಿದ್ದ ಅಂಗಡಿ ಮಾಲೀಕ.. ಕಾರಣ ಯುದ್ಧ!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

SCROLL FOR NEXT