ಬಾಲಿವುಡ್ ನ ಕನಸಿನ ರಾಣಿ, ಬಿಜೆಪಿ ಸಂಸದೆ ಹೇಮಾಮಾಲಿನಿ ಅವರು ನಾನು ಯಾವಾಗ ಬೇಕಾದರೂ ಮುಖ್ಯಮಂತ್ರಿ ಆಗಬಹುದು, ಆದರೆ ನನಗೇ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.
ನಾನು ಅಂದುಕೊಂಡರೆ ಒಂದೇ ನಿಮಿಷದಲ್ಲಿ ಮುಖ್ಯಮಂತ್ರಿ ಆಗಬಹುದು. ಆದರೆ ನನ್ನನ್ನು ನಾನು ಕಟ್ಟಿಹಾಕಿಕೊಳ್ಳಲು ಬಯಸುವುದಿಲ್ಲ. ನನ್ನ ಸ್ವಾತಂತ್ರ್ಯವು ಕೊನೆಕೊಳ್ಳುತ್ತದೆ ಎಂದು ಉತ್ತರಪ್ರದೇಶದ ಮಥುರಾದ ಬಿಜೆಪಿ ಸಂಸದೆ ಹೇಮಾಮಾಲಿನಿ ಅವರು ರಾಜಸ್ಥಾನದ ಬನ್ಸ್ವಾರಾ ನಗರದಲ್ಲಿ ಹೇಳಿದ್ದಾರೆ.
ಉತ್ತರಪ್ರದೇಶದ ಮುಖ್ಯಮಂತ್ರಿ ಹುದ್ದೆಗ ಸ್ಪಷ್ಟವಾದ ಉಲ್ಲೇಖವಿದೆ. ಅದನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹೊಂದಿದ್ದಾರೆ. ಇನ್ನು ನನ್ನ ಚಿತ್ರರಂಗದ ಖ್ಯಾತಿ ನಾನು ಸಂಸದೆಯಾಗಲು ಕಾರಣವಾಯಿತು ಎಂದು ಹೇಳಿದರು.
ಸಂಸದೆಯಾಗುವುದಕ್ಕೂ ಮುನ್ನ ನಾನು ಪಕ್ಷಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದೆ. ಸಂಸದೆಯಾದ ಬಳಿಕ ನಾಲ್ಕು ವರ್ಷಗಳಲ್ಲಿ ನನ್ನ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos