ಸಾಂದರ್ಭಿಕ ಚಿತ್ರ 
ದೇಶ

ಅಂತರ್ಜಾತಿ ವಿವಾಹದಡಿ ಡಾ.ಅಂಬೇಡ್ಕರ್ ಯೋಜನೆಗೆ ನೀರಸ ಪ್ರತಿಕ್ರಿಯೆ; ಜನರಲ್ಲಿ ಅರಿವಿನ ಕೊರತೆ

ಅರಿವಿನ ಕೊರತೆಯಿಂದಾಗಿ ಡಾ ಅಂಬೇಡ್ಕರ್ ಯೋಜನೆ ಸರಿಯಾಗಿ ಜಾರಿಗೆ ಬರುತ್ತಿಲ್ಲ. ಕಳೆದ ವರ್ಷ ...

ನವದೆಹಲಿ: ಅರಿವಿನ ಕೊರತೆಯಿಂದಾಗಿ ಡಾ ಅಂಬೇಡ್ಕರ್ ಯೋಜನೆ ಸರಿಯಾಗಿ ಜಾರಿಗೆ ಬರುತ್ತಿಲ್ಲ. ಕಳೆದ ವರ್ಷ ದೇಶಾದ್ಯಂತ ಈ ಯೋಜನೆಯಡಿ ಕೇವಲ 136 ಜೋಡಿ ಅಂತರ್ಜಾತಿ ವಿವಾಹದಡಿ ಈ ಸೌಲಭ್ಯ ಪಡೆದುಕೊಂಡಿದ್ದಾರೆ.

ಸ್ವಾಯತ್ತ ಸಂಸ್ಥೆಯಾಗಿರುವ ಡಾ ಅಂಬೇಡ್ಕರ್ ಫೌಂಡೇಶನ್ ಕಳೆದ ವರ್ಷ 582 ಪ್ರಸ್ತಾವನೆಗಳನ್ನು ಸ್ವೀಕರಿಸಿದ್ದು ಅವುಗಳಲ್ಲಿ 136 ಪ್ರಸ್ತಾವನೆಗಳು ಅನುಮೋದನೆಗೊಂಡಿವೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇತರ ಶಿಫಾರಸ್ಸುಗಳು ಪರಿಗಣನೆಯ ಹಂತದಲ್ಲಿವೆ ಎಂದು ಅವರು ಹೇಳಿದರು.

2013ರಲ್ಲಿ ಆರಂಭಗೊಂಡ ಡಾ ಅಂಬೇಡ್ಕರ್ ಯೋಜನೆಯಡಿ ಅಂತರ್ಜಾತಿ ವಿವಾಹವಾಗುವ ಜೋಡಿಗೆ ಸಹಾಯಧನ ಸಿಗುತ್ತದೆ. ಈ ಯೋಜನೆಯಡಿ ವರ್ಷಕ್ಕೆ ಸುಮಾರು 500 ಜೋಡಿಗಳು ಅರ್ಜಿ ಸಲ್ಲಿಸಬಹುದು. ಪ್ರತಿ ಜೋಡಿಗೆ ಎರಡೂವರೆ ಲಕ್ಷ ರೂಪಾಯಿ ಸಿಗಲಿದ್ದು ಅವುಗಳಲ್ಲಿ 1.5 ಲಕ್ಷ ರೂಪಾಯಿಗಳನ್ನು ಹಣದ ರೂಪದಲ್ಲಿ ವಿವಾಹದ ನಂತರ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಸ್ಥಿರ ಠೇವಣಿಯಾಗಿ ಇಡಲಾಗುತ್ತಿದ್ದು ಮೂರು ವರ್ಷಗಳ ನಂತರ ದಂಪತಿ ಹಣವನ್ನು ಪಡೆದುಕೊಳ್ಳಬಹುದು. ಅಸ್ಸಾಂ, ಛತ್ತೀಸ್ ಗಢ, ಗುಜರಾತ್, ಒಡಿಶಾ, ಪಂಜಾಬ್, ಸಿಕ್ಕಿಂ ಮತ್ತು ಉತ್ತರಾಖಂಡಗಳಲ್ಲಿ ಇದುವರೆಗೆ ಯಾರೂ ಇದರ ಲಾಭ ಪಡೆದುಕೊಂಡಿಲ್ಲ. ಈ ರಾಜ್ಯಗಳಲ್ಲಿ ಯಾವುದೇ ಪ್ರಸ್ತಾವನೆಗಳು ಅನುಮೋದನೆಗೊಂಡಿಲ್ಲ.

ತೆಲಂಗಾಣ ರಾಜ್ಯ ಈ ವಿಚಾರದಲ್ಲಿ ಮುಂಚೂಣಿಯಲ್ಲಿದ್ದು ಇಲ್ಲಿ 33 ದಂಪತಿಗಳಿಗೆ ಯೋಜನೆ ಅನುಮೋದನೆಯಾಗಿದೆ. ನಂತರದ ಸ್ಥಾನದಲ್ಲಿ ಆಂಧ್ರ ಪ್ರದೇಶವಿದ್ದು ಇಲ್ಲಿ 30 ದಂಪತಿ ಅನುದಾನ ಪಡೆದಿದ್ದಾರೆ. ತಮಿಳುನಾಡು ಮತ್ತು ಮಹಾರಾಷ್ಟ್ರಗಳಲ್ಲಿ 15 ಮಂದಿ ದಂಪತಿ ಹಣ ಪಡೆದುಕೊಂಡಿದ್ದಾರೆ. ಆದರೆ ಬಿಹಾರ, ಪಶ್ಚಿಮ ಬಂಗಾಳ, ಕರ್ನಾಟಕ, ಕೇರಳ, ಹಿಮಾಚಲ ಪ್ರದೇಶ, ರಾಜಸ್ತಾನ ಮತ್ತು ಹರ್ಯಾಣ ರಾಜ್ಯಗಳಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿಲ್ಲ.

ಈ ಯೋಜನೆಯ ಫಲ ಪಡೆಯಲು ಹಿಂದೂ ವಿವಾಹ ಕಾಯ್ದೆ 1955ರಡಿ ದಾಖಲಾತಿ ಮಾಡಿಕೊಂಡು ಅಂಬೇಡ್ಕರ್ ಯೋಜನೆಗೆ ವರ್ಷದೊಳಗೆ ದಾಖಲಾತಿ ಸಲ್ಲಿಸಬೇಕು ಎಂದು ಅಧಿಕಾರಿಗಳು ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT