ಸಾಂದರ್ಭಿಕ ಚಿತ್ರ 
ದೇಶ

ಅಂತರ್ಜಾತಿ ವಿವಾಹದಡಿ ಡಾ.ಅಂಬೇಡ್ಕರ್ ಯೋಜನೆಗೆ ನೀರಸ ಪ್ರತಿಕ್ರಿಯೆ; ಜನರಲ್ಲಿ ಅರಿವಿನ ಕೊರತೆ

ಅರಿವಿನ ಕೊರತೆಯಿಂದಾಗಿ ಡಾ ಅಂಬೇಡ್ಕರ್ ಯೋಜನೆ ಸರಿಯಾಗಿ ಜಾರಿಗೆ ಬರುತ್ತಿಲ್ಲ. ಕಳೆದ ವರ್ಷ ...

ನವದೆಹಲಿ: ಅರಿವಿನ ಕೊರತೆಯಿಂದಾಗಿ ಡಾ ಅಂಬೇಡ್ಕರ್ ಯೋಜನೆ ಸರಿಯಾಗಿ ಜಾರಿಗೆ ಬರುತ್ತಿಲ್ಲ. ಕಳೆದ ವರ್ಷ ದೇಶಾದ್ಯಂತ ಈ ಯೋಜನೆಯಡಿ ಕೇವಲ 136 ಜೋಡಿ ಅಂತರ್ಜಾತಿ ವಿವಾಹದಡಿ ಈ ಸೌಲಭ್ಯ ಪಡೆದುಕೊಂಡಿದ್ದಾರೆ.

ಸ್ವಾಯತ್ತ ಸಂಸ್ಥೆಯಾಗಿರುವ ಡಾ ಅಂಬೇಡ್ಕರ್ ಫೌಂಡೇಶನ್ ಕಳೆದ ವರ್ಷ 582 ಪ್ರಸ್ತಾವನೆಗಳನ್ನು ಸ್ವೀಕರಿಸಿದ್ದು ಅವುಗಳಲ್ಲಿ 136 ಪ್ರಸ್ತಾವನೆಗಳು ಅನುಮೋದನೆಗೊಂಡಿವೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇತರ ಶಿಫಾರಸ್ಸುಗಳು ಪರಿಗಣನೆಯ ಹಂತದಲ್ಲಿವೆ ಎಂದು ಅವರು ಹೇಳಿದರು.

2013ರಲ್ಲಿ ಆರಂಭಗೊಂಡ ಡಾ ಅಂಬೇಡ್ಕರ್ ಯೋಜನೆಯಡಿ ಅಂತರ್ಜಾತಿ ವಿವಾಹವಾಗುವ ಜೋಡಿಗೆ ಸಹಾಯಧನ ಸಿಗುತ್ತದೆ. ಈ ಯೋಜನೆಯಡಿ ವರ್ಷಕ್ಕೆ ಸುಮಾರು 500 ಜೋಡಿಗಳು ಅರ್ಜಿ ಸಲ್ಲಿಸಬಹುದು. ಪ್ರತಿ ಜೋಡಿಗೆ ಎರಡೂವರೆ ಲಕ್ಷ ರೂಪಾಯಿ ಸಿಗಲಿದ್ದು ಅವುಗಳಲ್ಲಿ 1.5 ಲಕ್ಷ ರೂಪಾಯಿಗಳನ್ನು ಹಣದ ರೂಪದಲ್ಲಿ ವಿವಾಹದ ನಂತರ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಸ್ಥಿರ ಠೇವಣಿಯಾಗಿ ಇಡಲಾಗುತ್ತಿದ್ದು ಮೂರು ವರ್ಷಗಳ ನಂತರ ದಂಪತಿ ಹಣವನ್ನು ಪಡೆದುಕೊಳ್ಳಬಹುದು. ಅಸ್ಸಾಂ, ಛತ್ತೀಸ್ ಗಢ, ಗುಜರಾತ್, ಒಡಿಶಾ, ಪಂಜಾಬ್, ಸಿಕ್ಕಿಂ ಮತ್ತು ಉತ್ತರಾಖಂಡಗಳಲ್ಲಿ ಇದುವರೆಗೆ ಯಾರೂ ಇದರ ಲಾಭ ಪಡೆದುಕೊಂಡಿಲ್ಲ. ಈ ರಾಜ್ಯಗಳಲ್ಲಿ ಯಾವುದೇ ಪ್ರಸ್ತಾವನೆಗಳು ಅನುಮೋದನೆಗೊಂಡಿಲ್ಲ.

ತೆಲಂಗಾಣ ರಾಜ್ಯ ಈ ವಿಚಾರದಲ್ಲಿ ಮುಂಚೂಣಿಯಲ್ಲಿದ್ದು ಇಲ್ಲಿ 33 ದಂಪತಿಗಳಿಗೆ ಯೋಜನೆ ಅನುಮೋದನೆಯಾಗಿದೆ. ನಂತರದ ಸ್ಥಾನದಲ್ಲಿ ಆಂಧ್ರ ಪ್ರದೇಶವಿದ್ದು ಇಲ್ಲಿ 30 ದಂಪತಿ ಅನುದಾನ ಪಡೆದಿದ್ದಾರೆ. ತಮಿಳುನಾಡು ಮತ್ತು ಮಹಾರಾಷ್ಟ್ರಗಳಲ್ಲಿ 15 ಮಂದಿ ದಂಪತಿ ಹಣ ಪಡೆದುಕೊಂಡಿದ್ದಾರೆ. ಆದರೆ ಬಿಹಾರ, ಪಶ್ಚಿಮ ಬಂಗಾಳ, ಕರ್ನಾಟಕ, ಕೇರಳ, ಹಿಮಾಚಲ ಪ್ರದೇಶ, ರಾಜಸ್ತಾನ ಮತ್ತು ಹರ್ಯಾಣ ರಾಜ್ಯಗಳಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿಲ್ಲ.

ಈ ಯೋಜನೆಯ ಫಲ ಪಡೆಯಲು ಹಿಂದೂ ವಿವಾಹ ಕಾಯ್ದೆ 1955ರಡಿ ದಾಖಲಾತಿ ಮಾಡಿಕೊಂಡು ಅಂಬೇಡ್ಕರ್ ಯೋಜನೆಗೆ ವರ್ಷದೊಳಗೆ ದಾಖಲಾತಿ ಸಲ್ಲಿಸಬೇಕು ಎಂದು ಅಧಿಕಾರಿಗಳು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT