ದೆಹಲಿ: ವಿಷಪ್ರಾಶನದಿಂದ 3 ಮಕ್ಕಳು ಸತ್ತಿರುವ ಸಾಧ್ಯತೆ- ಪ್ರಾಥಮಿಕ ವರದಿ 
ದೇಶ

ದೆಹಲಿ: ವಿಷಪ್ರಾಶನದಿಂದ 3 ಮಕ್ಕಳು ಸತ್ತಿರುವ ಸಾಧ್ಯತೆ- ಪ್ರಾಥಮಿಕ ವರದಿ

ಆಹಾರವಿಲ್ಲದೆ ಹಸಿವಿನಿಂದ ಮೂವರು ಸಹೋದರಿಯರು ಸಾವನ್ನಪ್ಪಿದ ಪ್ರಕರಣದಲ್ಲಿ ಮತ್ತೊಂದು ಅಂಶ ಬೆಳಕಿಗೆ ಬಂದಿದ್ದು, ಪ್ರಾಥಮಿಕ ವಿಚಾರಣಾ ವರದಿಯ ಪ್ರಕಾರ ತಂದೆಯೇ ಮಕ್ಕಳಿಗೆ ವಿಷಪ್ರಾಶನ ಮಾಡಿಸಿರುವ

ನವದೆಹಲಿ: ಆಹಾರವಿಲ್ಲದೆ ಹಸಿವಿನಿಂದ ಮೂವರು ಸಹೋದರಿಯರು ಸಾವನ್ನಪ್ಪಿದ ಪ್ರಕರಣದಲ್ಲಿ ಮತ್ತೊಂದು ಅಂಶ ಬೆಳಕಿಗೆ ಬಂದಿದ್ದು, ಪ್ರಾಥಮಿಕ ವಿಚಾರಣಾ ವರದಿಯ ಪ್ರಕಾರ ತಂದೆಯೇ ಮಕ್ಕಳಿಗೆ ವಿಷಪ್ರಾಶನ ಮಾಡಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 
ಉಪವಿಭಾಗೀಯ ಮ್ಯಾಜಿಸ್ಟ್ರೇಟ್  ಸಲ್ಲಿಸಿರುವ ವರದಿಯ ಪ್ರಕಾರ ಹಿರಿಯ ಬಾಲಕಿಯ ಬ್ಯಾಂಕ್ ಖಾತೆಯಲ್ಲಿ ಹಣವಿದ್ದು  ಬಡತನದ ಕಾರಣದಿಂದ ಹಸಿದುಕೊಂಡಿರಲಿಲ್ಲ ಎಂಬುದು ತಿಳಿದುಬಂದಿದೆ. ಮಾನ್ಸಿ (8), ಶಿಖಾ (4), ಪರುಲ್ (2) ಮೃತಪಟ್ಟ ಸಹೋದರಿಯರಾಗಿದ್ದಾರೆ. ಪೂರ್ವ ದೆಹಲಿಯ ಮಂಡವಾಲಿ ಕೊಳಗೇರಿಯಲ್ಲಿರುವ ಮನೆಯೊಂದರಲ್ಲಿ ಮೃತದೇಹಗಳು ಪತ್ತೆಯಾಗಿದ್ದ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿತ್ತು. 
ಘಟನೆ ಬಗ್ಗೆ ಸರ್ಕಾರಕ್ಕೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವರದಿ ಸಲ್ಲಿಸಿದ್ದು, ಸಾಯುವ ಸಮಯದಲ್ಲಿ ಮೂವರು ಮಕ್ಕಳ ಪೌಷ್ಟಿಕಾಂಶದ ಸ್ಥಿತಿ ಉತ್ತಮವಾಗಿರಲಿಲ್ಲ, ಅವರಿಗೆ ವಾಂತಿ ಹಾಗೂ ಅತಿಸಾರದ ಸಮಸ್ಯೆ ಕಾಡುತ್ತಿತ್ತು ಎಂದು ಹೇಳಲಾಗಿದೆ. ಮೂವರು ಮಕ್ಕಳ ಪೈಕಿ ಹಿರಿಯ ಮಗುವಿನ ಖಾತೆಯಲ್ಲಿ 1805 ರೂಪಾಯಿಗಳಿತ್ತು ಎಂದು ತಿಳಿದುಬಂದಿದೆ. ಮಕ್ಕಳ ತಾಯಿ ಮಾನಸಿಕವಾಗಿ ಸದೃಢವಾಗಿಲ್ಲದ ಕಾರಣ ಘಟನೆ ಬಗ್ಗೆ ಸ್ಪಷ್ಟತೆ ಸಿಗುತ್ತಿ;;ಅ. 
ಮೂವರು ಮಕ್ಕಳು ಸಾಯುವುದಕ್ಕೂ ಹಿಂದಿನ ರಾತ್ರಿ ಅವರ ತಂದೆ ಬಿಸಿ ನೀರಿನಲ್ಲಿ ಔಷಧವನ್ನು ಬೆರೆಸಿ ನೀಡಿದ್ದರು ಇದಾದ ಬಳಿಕ ಆ ವ್ಯಕ್ತಿಯೂ ಕಣ್ಮರೆಯಾಗಿರುವುದು ಅನುಮಾನ ಮೂಡಿಸಿದೆ, ಮತ್ತಷ್ಟು ಸ್ಪಷ್ಟತೆ ಸಿಗಬೇಕಾದರೆ ಆಳವಾದ ತನಿಖೆ ನಡೆಸುವ ಅಗತ್ಯವಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್ ಗಳು 16 ವರ್ಷ ಬಳಿಕ ಡೆಲಿವರಿ, ಬೇಸ್ತು ಬಿದ್ದ ಅಂಗಡಿ ಮಾಲೀಕ.. ಕಾರಣ ಯುದ್ಧ!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

SCROLL FOR NEXT