ಸುಬ್ರಹ್ಮಣ್ಯ ಸ್ವಾಮಿ 
ದೇಶ

ಇಮ್ರಾನ್ ಖಾನ್ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲಿದ್ದಾರೆ ಎಂಬುದು ತಪ್ಪು ಕಲ್ಪನೆ - ಸುಬ್ರಹ್ಮಣ್ಯ ಸ್ವಾಮಿ

ಪಾಕಿಸ್ತಾನದ ಪ್ರಧಾನಮಂತ್ರಿ ಗದ್ದುಗೆ ಏರುವ ತವಕದಲ್ಲಿರುವ ಇಮ್ರಾನ್ ಖಾನ್ ಭಾರತದೊಂದಿಗಿನ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲಿದ್ದಾರೆ ಎಂಬುದು ತಪ್ಪು ಕಲ್ಪನೆಯಾಗಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯ ಸ್ವಾಮಿ ಹೇಳಿದ್ದಾರೆ.

ನವದೆಹಲಿ: ಪಾಕಿಸ್ತಾನದ ಪ್ರಧಾನಮಂತ್ರಿ ಗದ್ದುಗೆ ಏರುವ ತವಕದಲ್ಲಿರುವ ಇಮ್ರಾನ್ ಖಾನ್  ಭಾರತದೊಂದಿಗಿನ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲಿದ್ದಾರೆ ಎಂಬುದು ತಪ್ಪು ಕಲ್ಪನೆಯಾಗಿದೆ ಎಂದು   ಬಿಜೆಪಿ ಮುಖಂಡ ಸುಬ್ರಹ್ಮಣ್ಯ ಸ್ವಾಮಿ ಹೇಳಿದ್ದಾರೆ.

ಇಮ್ರಾನ್ ಖಾನ್ ಅವರ ಬಗ್ಗೆಯೇ  ಹೆಚ್ಚಿನ ಕನಸುಕಾಣುತ್ತಿದ್ದು,ಪಾಕಿಸ್ತಾನದೊಂದಿಗೆ ಕಾಶ್ಮೀರ ಕುರಿತು ಮಾತುಕತೆ ನಡೆಸುವ ಅಗತ್ಯವಿಲ್ಲ.ನಮ್ಮ ಕಾಶ್ಮೀರದ ಮೂರನೇ ಒಂದು ಭಾಗವನ್ನು ಪಾಕಿಸ್ತಾನ ಅಕ್ರಮವಾಗಿ ಹೊಂದಿದೆ. ಅದನ್ನು ಪಾಕಿಸ್ತಾನ ಮರಳಿ ಭಾರತಕ್ಕೆ ನೀಡಬೇಕು,  ಇಲ್ಲದಿದ್ದರೆ  ಭವಿಷ್ಯದಲ್ಲಿ ಎದುರಾಗುವ ಪಾಕಿಸ್ತಾನ ವಿಭಜನೆಗೆ ಸಿದ್ಧರಾಗುವಂತೆ  ಸ್ವಾಮಿ ಹೇಳಿದ್ದಾರೆ.

ಚುನಾವಣೆ ನಂತರ  ಮಾತನಾಡಿದ ಪಾಕಿಸ್ತಾನ ತೆಹ್ರಿಕ್ ಇ- ಇನ್ಸಪ್  ಮುಖ್ಯಸ್ಥ ಇಮ್ರಾನ್ ಖಾನ್, ದೇಶದ ಅಭಿವೃದ್ದಿ ಹಾಗೂ ಆಡಳಿತದ ಬಗ್ಗೆ  ಕನಸು ಹೊಂದಿದ್ದು, ವಿದೇಶಾಂಗ  ನೀತಿಗೆ ಆದ್ಯತೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ. ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಲಿದ್ದು, ಮಾತುಕತೆಯ ಮೂಲಕ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದಾಗಿ ಹೇಳಿದ್ದರು.

 ಬಲೊಚಿಸ್ತಾನದಲ್ಲಿ ಭಾರತದಲ್ಲಿ ತೊಂದರೆ  ಹಾಗೂ ಕಾಶ್ಮೀರದಲ್ಲಿ ಪಾಕಿಸ್ತಾನದ ತೊಂದರೆ  ಬಗ್ಗೆ ಕೂತು  ಸಮಸ್ಯೆ ಬಗೆಹರಿಸಿಕೊಳ್ಳಲಾಗುವುದು,  ಈ ನಿಟ್ಟಿನಲ್ಲಿ ಭಾರತ  ಒಂದು ಹೆಜ್ಜೆ ಮುಂದಿದ್ದರೆ ಪಾಕಿಸ್ತಾನ ಎರಡು ಹೆಜ್ಜೆ ಮುಂದಿಡಲಾಗುವುದು, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡು ಭಾರತದೊಂದಿಗೆ ಉತ್ತಮ ಸ್ನೇಹ ಹೊಂದುವುದಾಗಿ ಇಮ್ರಾನ್ ಖಾನ್ ಹೇಳಿಕೆ ನೀಡಿದ್ದರು.

ಪಾಕಿಸ್ತಾನದಲ್ಲಿ ನಡೆದ ಚುನಾವಣೆಯಲ್ಲಿ ಇಮ್ರಾನ್ ಖಾನ್  ನೇತೃತ್ವದ ಪಿಟಿಐ ಪಕ್ಷ ಹೆಚ್ಚು  ಸ್ಥಾನಗಳನ್ನು ಪಡೆದುಕೊಂಡು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದಗ್ಯೂ, ಚುನಾವಣಾ ಆಯೋಗ ಅಂತಿಮ ಫಲಿತಾಂಶವನ್ನು  ಇನ್ನೂ ಪ್ರಕಟಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT