ಸಂಗ್ರಹ ಚಿತ್ರ 
ದೇಶ

'ತಲೆಮರೆಸಿಕೊಳ್ಳಲು ಅಲ್ಲ, ವ್ಯಾಪಾರಕ್ಕಾಗಿ ಆ್ಯಂಟಿಗುವಾ ನಾಗರೀಕತ್ವ ಪಡೆದಿರುವೆ': ಮೆಹುಲ್ ಚೋಕ್ಸಿ

ತಲೆಮರೆಸಿಕೊಳ್ಳಲು ಅಲ್ಲ, ವ್ಯಾಪಾರಕ್ಕಾಗಿ ಆ್ಯಂಟಿಗುವಾ ನಾಗರೀಕತ್ವ ಪಡೆದಿರುವೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿ ಹೇಳಿದ್ದಾರೆ.

ಲಂಡನ್: ತಲೆಮರೆಸಿಕೊಳ್ಳಲು ಅಲ್ಲ, ವ್ಯಾಪಾರಕ್ಕಾಗಿ ಆ್ಯಂಟಿಗುವಾ ನಾಗರೀಕತ್ವ ಪಡೆದಿರುವೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿ ಹೇಳಿದ್ದಾರೆ.
ಕೆರಿಬಿಯನ್ ದೇಶಗಳಲ್ಲಿ ಒಂದಾದ ಆ್ಯಂಟಿಗುವಾ ಮತ್ತು ಬಾರ್ಬುಡಾ ದೇಶಗಳ ನಾಗರೀಕತ್ವಕ್ಕೆ ಭಾರತದ ಖ್ಯಾತ ಆಭರಣ ಉದ್ಯಮಿ ಮೆಹುಲ್ ಚೋಕ್ಸಿ ಅರ್ಜಿ ಹಾಕುತ್ತಿದ್ದಂತೆಯೇ ಭಾರತದಲ್ಲಿ ಎದುರಾಗಿದ್ದ ವ್ಯಾಪಕ ಟೀಕೆಗಳಿಗೆ ಉದ್ಯಮಿ ಮೆಹುಲ್ ಚೋಕ್ಸಿ ಉತ್ತರಿಸಿದ್ದು, ನಾನು ತಲೆಮರೆಸಿಕೊಳ್ಳಲು ಕೆರಿಬಿಯನ್ ದೇಶಗಳ ನಾಗರಿಕತ್ವ ಪಡೆದಿಲ್ಲ. ವ್ಯಾಪರಕ್ಕಾಗಿ ಆ್ಯಂಟಿಗುವಾ ಮತ್ತು ಬಾಬ್ರುಡಾ ನಾಗರಿಕತ್ವಕ್ಕೆ ಅರ್ಜಿ ಹಾಕಿದ್ದೇನೆ ಎಂದು ಹೇಳಿದ್ದಾರೆ.
ಈ ಬಗ್ಗೆ ಮೆಹುಲ್ ಚೋಕ್ಸಿ ಪರ ವಕೀಲ ಡೇವಿಡ್ ಡೋರ್ಸೆಟ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಭಾರತ ಸರ್ಕಾರ ಮತ್ತು ಭಾರತೀಯ ಮಾಧ್ಯಮಗಳು ಮಾಡಿರುವು ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ನಾನು ಕೆರಿಬಿಯನ್ ದೇಶಗಳ ಕಾನೂನಿನಂತೆಯೇ ಹೂಡಿಕೆ ಕಾರ್ಯಕ್ರಮದ ಅಡಿ ನಾಗರಿಕತ್ವಕ್ಕೆ ಅರ್ಜಿ ಸಲ್ಲಿಸಿರುವೆ. ನಾಗರಿಕತ್ವಕ್ಕಾಗಿ ನಾನು ಯಾವುದೇ ವಂಚನೆ ಮಾಡಿಲ್ಲ. 2017ರ ನವೆಂಬರ್ ನಲ್ಲೇ ನನಗೆ ಆ್ಯಂಟಿಗುವಾ ನಾಗರಿಕತ್ವ ದೊರಕಿತ್ತು. ಕೇವಲ ನನ್ನ ವ್ಯಾಪಾರ ವಿಸ್ತರಣೆ ಮಾಡುವ ಒಂದೇ ಉದ್ದೇಶದಿಂದ ನಾನು ನಾಗರಿಕತ್ವ ಪಡೆದಿರುವ ಮತ್ತಾವುದೇ ದುರುದ್ದೇಶವಿಲ್ಲ. 2018ರ ಜನವರಿಯಿಂದ ನಾನು ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಮೆಹುಲ್ ಚೋಕ್ಸಿ ಹೇಳಿದ್ದಾರೆ.
ಇನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನೀರವ್ ಮೋದಿ ಮತ್ತು ಆತನ ಅಂಕಲ್ ಮೆಹುಲ್ ಚೋಕ್ಸಿ ವಿರುದ್ಧ ಭಾರತದಲ್ಲಿ ಇಡಿ, ಆದಾಯ ತೆರಿಗೆ ಅಧಿಕಾರಿಗಳು ಮತ್ತು ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT