ಕಾವೇರಿ ಆಸ್ಪತ್ರೆ ಮುಂದೆ ಡಿಎಂಕೆ ಕಾರ್ಯಕರ್ತರ ದಂಡು 
ದೇಶ

ಕರುಣಾನಿಧಿ ರಕ್ತದೊತ್ತಡ ನಿಯಂತ್ರಣದಲ್ಲಿದೆ, ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ: ಕನ್ನಿಮೋಳಿ

ಅನಾರೋಗ್ಯಕ್ಕೆ ತುತ್ತಾಗಿ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದು, ರಕ್ತದೊತ್ತಡ ನಿಯಂತ್ರಣದಲ್ಲಿದೆ ಎಂದು ಅವರ ಪುತ್ರಿ ಕನ್ನಿಮೋಳಿ ಹೇಳಿದ್ದಾರೆ.

ಚೆನ್ನೈ: ಅನಾರೋಗ್ಯಕ್ಕೆ ತುತ್ತಾಗಿ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವ ಡಿಎಂಕೆ ಮುಖ್ಯಸ್ಥ ಎಂ  ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದು, ರಕ್ತದೊತ್ತಡ ನಿಯಂತ್ರಣದಲ್ಲಿದೆ ಎಂದು ಅವರ ಪುತ್ರಿ ಕನ್ನಿಮೋಳಿ ಹೇಳಿದ್ದಾರೆ.
ರಕ್ತದೊತ್ತಡ ದಿಢೀರ್ ಕಡಿಮೆಯಾದ ಕಾರಣ ಕರುಣಾನಿಧಿ ಅವರನ್ನು ಅವರ ನಿವಾಸದಿಂದ ಕಾವೇರಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಅಲ್ಲದೆ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ. ಇನ್ನು ಅವರ ನಿವಾಸ ಮತ್ತು ಕಾವೇರಿ ಆಸ್ಪತ್ರೆ ಎದುರು ಡಿಎಂಕೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲೆ ನೆರೆದಿದ್ದು, ಡಿಎಂಕೆ ಮುಖ್ಯಸ್ಥರ ಆರೋಗ್ಯದ ಕುರಿತು ಕಳವಳದಿಂದ್ದಾರೆ.
ಈ ಹಿನ್ನಲೆಯಲ್ಲಿ ಕರುಣಾನಿಧಿ ಅವರ ಆರೋಗ್ಯದ ಕುರಿತು ಅವರ ಪುತ್ರಿ ಕನ್ನಿಮೋಳಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದು, ರಕ್ತದೊತ್ತಡ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ. ಅಲ್ಲದೆ ಬೆಂಬಲಿಗರು ಮತ್ತು ಅಭಿಮಾನಿಗಳು ಆತಂಕಗೊಳ್ಳದಂತೆ ಕಿವಿಮಾತು ಹೇಳಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಕೇಂದ್ರ ಸಚಿವ ಎ ರಾಜಾ, ರಾಜ್ಯದ ಐದು ಬಾರಿ ಮುಖ್ಯಮಂತ್ರಿಗಳಾಗಿದ್ದ ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದು, ಅವರಿಗೆ ಯಾವುದೇ ಅಪಾಯವಿಲ್ಲ. ಕಾರ್ಯಕರ್ತರು ಆತಂಕಗೊಳ್ಳಬಾರದು ಎಂದು ಹೇಳಿದ್ದಾರೆ. 
ಇನ್ನು ಕರುಣಾನಿಧಿ ಅವರು ಡಿಎಂಕೆ ಪಕ್ಷದ ಮುಖ್ಯಸ್ಥರಾಗಿ 50 ವರ್ಷ ತುಂಬಿದ್ದು, ಈ ಹಿನ್ನಲೆಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಹಮ್ಮಿಕೊಂಡಿದ್ದರಾದರೂ, ಅವರು ಆಸ್ಪತ್ರೆಗೆ ದಾಖಲಾಗಿರುವುದರಿಂದ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT