ಸಂಗ್ರಹ ಚಿತ್ರ 
ದೇಶ

ಪಟೇಲ್ ಹೊರಾಟದಂತೆಯೇ ಮರಾಠಿಗರ ಹೋರಾಟ ಹತ್ತಿಕ್ಕಲು ಸರ್ಕಾರದ ಯತ್ನ: ಶಿವಸೇನೆ ಕಿಡಿ

ಮೀಸಲಾತಿಗಾಗಿ ಹೋರಾಡಿದ್ದ ಪಟೇಲ್ ಸಮುದಾಯದ ಹೋರಾಟವನ್ನು ಹತ್ತಿಕ್ಕಿದಂತೆಯೇ ಮರಾಠಿಗರ ಹೋರಾಟವನ್ನೂ ಹತ್ತಿಕ್ಕಲೂ ಬಿಜೆಪಿ ಸರ್ಕಾರ ಯತ್ನಿಸುತ್ತಿದೆ ಎಂದು ಶಿವಸೇನೆ ಆರೋಪಿಸಿದೆ.

ಮುಂಬೈ: ಮೀಸಲಾತಿಗಾಗಿ ಹೋರಾಡಿದ್ದ ಪಟೇಲ್ ಸಮುದಾಯದ ಹೋರಾಟವನ್ನು ಹತ್ತಿಕ್ಕಿದಂತೆಯೇ ಮರಾಠಿಗರ ಹೋರಾಟವನ್ನೂ ಹತ್ತಿಕ್ಕಲೂ ಬಿಜೆಪಿ ಸರ್ಕಾರ ಯತ್ನಿಸುತ್ತಿದೆ ಎಂದು ಶಿವಸೇನೆ ಆರೋಪಿಸಿದೆ.
ಮರಾಠ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ತನ್ನ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆದಿರುವ ಶಿವಸೇನೆ, ಬಿಜೆಪಿ ಸರ್ಕಾರ ಎಂದಿಗೂ ತನ್ನವಿರುದ್ಧದ ಹೋರಾಟವನ್ನು ಸಹಿಸಿಕೊಳ್ಳುವುದಿಲ್ಲ. ಹೇಗಾದರೂ ಸರಿ ಹೋರಾಟಗಳನ್ನು ಹತ್ತಿಕ್ಕಲು ಯತ್ನಿಸುತ್ತಿರುತ್ತದೆ. ಈ ಹಿಂದೆ ಗುಜರಾತ್ ನಲ್ಲಿ ನಡೆದಿದ್ದ್ ಪಟೇಲರ ಮೀಸಲಾತಿ ಹೋರಾಟವನ್ನು ಹತ್ತಿಕ್ಕಿದ್ದಂತೆಯೇ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮರಾಠಿಗರ ಮೀಸಲಾತಿ ಹೋರಾಟವನ್ನೂ ಹತ್ತಿಕ್ಕಲು ಯತ್ನಿಸಿದೆ ಎಂದು ಶಿವಸೇನೆ ಹೇಳಿದೆ.
'ಕೇಂದ್ರ ಸರ್ಕಾರ ತನ್ನ ವಿರುದ್ಧ ಯಾವುದೇ ಚಳವಳಿ ಮತ್ತು ಹೋರಾಟವನ್ನು ಸಹಿಸಿಕೊಂಡಿಲ್ಲ. ಅದನ್ನು ಹೋರಾಟದ ಬೇಡಿಕೆಗಳನ್ನೂ ಈಡೇರಿಸದೇ, ಹೇಗಾದರೂ ಸರಿ ಅದನ್ನು ಹತ್ತಿಕ್ಕಲು ಯತ್ನಿಸುತ್ತದೆ. ಇದಕ್ಕೆ ಪಟೇಲರ ಮೀಸಲಾತಿ ಹೋರಾಟ ಉತ್ತಮ ನಿದರ್ಶನ. ಅದೇ ರೀತಿಯಲ್ಲೇ ಮರಾಠಿಗರ ಮೀಸಲಾತಿ ಹೋರಾಟವನ್ನೂ ಹತ್ತಿಕ್ಕಲು ಕೇಂದ್ರ ಸರ್ಕಾರ ಹವಣಿಸುತ್ತಿದೆ ಎಂದು ಹೇಳಿದೆ.
ಅಂತೆಯೇ ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನಿವಿಸ್ ಅವರ ವಿರುದ್ಧವೂ ಪರೋಕ್ಷ ಕಿಡಿಕಾರಿರುವ ಶಿವಸೇನೆ, ಕೇಂದ್ರ ಸಚಿವರಾಗಿರುವ ಪಂಕಜಾ ಮುಂಡೆ ಅವರು ಒಂದೇ ಒಂದು ದಿನ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮರಾಠಿಗರ ಸಮಸ್ಯೆ ಆಲಿಸಲಿ. ಆಗ ಖಂಡಿತಾ ಅವರೇ ಮೀಸಲಾತಿ ಹೋರಾಟದ ಬೇಡಿಕೆಗಳನ್ನು ಖಂಡಿತಾ ಈಡೇರಿಸುತ್ತಾರೆ. ಅಷ್ಟರ ಮಟ್ಟಿಗೆ ಮರಾಠಿಗರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹೇಳಿದೆ.
ಅಂತೆಯೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ತನ್ನ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನೆ, ಇಲ್ಲಿ ಮಹಾರಾಷ್ಟ್ರದಲ್ಲಿ ಮರಾಠಿಗರು ತಮ್ಮ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದ್ದರೆ ಅತ್ತ ಪ್ರಧಾನಿ ನರೇಂದ್ರ ಮೋದಿ ವಿದೇಶ ಸುತ್ತುತ್ತಿದ್ದಾರೆ. ಸಿಎಂ ಫಡ್ನವಿಸ್ ಅವರೇ ತುರ್ತಾಗಿ ಪ್ರಧಾನಿಗಳನ್ನು ಭೇಟಿಯಾಗಬೇಕು ಎಂದರೆ ಅವರು ಯಾರನ್ನು ಬೇಟಿ ಮಾಡಿ ಚರ್ಚಿಸಬೇಕು. ಪ್ರಧಾನಿ ಮೋದಿಗೆ ದೇಶವಾಸಿಗಳ ಸಮಸ್ಯೆ ಆಲಿಸುವುದಕ್ಕಿಂತ ವಿದೇಶ ಸುತ್ತುವುದೇ ಮುಖ್ಯವಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT