ಪ್ರಧಾನಿ ನರೇಂದ್ರ ಮೋದಿ 
ದೇಶ

ಭಾಗಿದಾರ್ ಟೀಕೆ ಅಲ್ಲ, ಅಭಿನಂದನೆ - ಪ್ರಧಾನಿ ಮೋದಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಚೌಕಿದಾರ್, ಭಾಗೀದಾರ್ ಟೀಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಇಂದು ವಾಗ್ದಾಳಿ ನಡೆಸಿದ್ದಾರೆ. ಇದು ಟೀಕೆಯಲ್ಲಾ ಅಭಿನಂದನೆ ಅಂತಾ ಭಾವಿಸಿರುವುದಾಗಿ ಅವರು ಹೇಳಿದ್ದಾರೆ.

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಚೌಕಿದಾರ್, ಭಾಗೀದಾರ್  ಟೀಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಇಂದು ವಾಗ್ದಾಳಿ ನಡೆಸಿದ್ದಾರೆ. ಇದು ಟೀಕೆಯಲ್ಲಾ ಅಭಿನಂದನೆ ಅಂತಾ ಭಾವಿಸಿರುವುದಾಗಿ ಅವರು ಹೇಳಿದ್ದಾರೆ.

ಕೆಲ ದಿನಗಳಲ್ಲಿ ನನ್ನನ್ನು ದೇಶದ ಕಾವಲುಗಾರ ಅಲ್ಲ ಭಾಗಿದಾರ್ ಅಂತಾ ಪ್ರತಿಪಕ್ಷಗಳು ಕರೆಯುತ್ತಿವೆ  ಆದರೆ, ನಾನು ಬಡವರ ಸಂಕಷ್ಟಗಳಲ್ಲಿ ಭಾಗಿದ್ದಾರ ನಾಗಿದ್ದೇನೆ ಎಂಬುದಕ್ಕೆ ಅಭಿನಂದನೆ ಸಲ್ಲಿಸಲಾಗುತ್ತಿದೆ ಎಂದುಕೊಂಡಿದ್ದೇನೆ  ಎಂದು ಅವರು ಹೇಳಿದ್ದಾರೆ.

ಈ ಆರೋಪವನ್ನು ಅಭಿನಂದನೆ ಅಂದುಕೊಂಡಿದ್ದೇನೆ.  ಬಡವರು, ಶ್ರಮಜೀವಿ ಕಾರ್ಮಿಕರು, ಬೆಳೆನಷ್ಟ ಮಾಡಿಕೊಂಡಿರುವ  ಬಡ ರೈತರು, ದುಃಖತಪ್ತ ತಾಯಿಯ ಹಾಗೂ ದೇಶ ಸೇವೆಗಾಗಿ ತಮ್ಮ ಪ್ರಾಣ ಮುಡುಪಾಗಿಟ್ಟಿರುವ  ಯೋಧರ ಸಂಕಷ್ಟಗಳ ನಿವಾರಣೆಯಲ್ಲಿ  ಭಾಗಿಯಾದ ಬಗ್ಗೆ ನನ್ನಗೆ ಹೆಮ್ಮೆಯಿದೆ ಎಂದು ಅವರು ಹೇಳಿದ್ದಾರೆ.

ನಗರಾಭಿವೃದ್ದಿಗೆ ಸಂಬಂಧಿಸಿದ  ಮೂರು ಸರಕಾರದ ಉಪಕ್ರಮಗಳ ಮೂರನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ  ಮಾತನಾಡಿದ ಮೋದಿ , 2022ರೊಳಗೆ ಸೂರು ಇಲ್ಲದ ಎಲ್ಲ ಜನರಿಗೂ ಸರ್ಕಾರ ಸೂರು ಕಲ್ಪಿಸಲಿದೆ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT