ಪಿ ಚಿದಂಬರಂ 
ದೇಶ

ಒಂದು ವೇಳೆ 'ಮುಕ್ತ ಭಾರತ' ಅಂತ ಇರೋದಾದ್ರೆ, ಅದು ಬಿಜೆಪಿ ಮುಕ್ತ: ಚಿದಂಬರಂ

ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ, ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಘೋಷಣೆಗೆ...

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ, ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಘೋಷಣೆಗೆ ಹೆದರಬೇಡಿ. ಒಂದು ವೇಳೆ ಮುಕ್ತ ಭಾರತ ಅಂತ ಇರೋದಾದರೆ ಅದು ಬಿಜೆಪಿ ಮುಕ್ತ ಭಾರತ ಅಂತ ಹೇಳಿದ್ದಾರೆ. 
ಭಾರತದಲ್ಲಿ ಕಾಂಗ್ರೆಸ್ ಪ್ರಶ್ನಾತೀತ ರಾಜಕೀಯ ಪಕ್ಷವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯದಲ್ಲಿ ಹಲವು ಬದಲಾವಣೆಗಳು ಆಗಿದ್ದು ಸದ್ಯ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಅಗತ್ಯವಿದೆ. ಮುಂದಿನ ಚುನಾವಣೆಗಳು ಪಕ್ಷವನ್ನು ತಳಮಟ್ಟವನ್ನು ಬಲಪಡಿಸುವ ಮೂಲಕ ಸ್ಪರ್ಧಿಸಬೇಕಿದೆ ಎಂದು ಕಾರ್ಯಕರ್ತರಿಗೆ ಚಿದಂಬರಂ ಧೈರ್ಯ ತುಂಬಿದರು. 
ಒಂದು ಕಾಲವಿತ್ತು ಅಂದು ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಹಾಗೂ ಇಂದಿರಾಗಾಂಧಿ ಹೆಸರನ್ನು ಹೇಳಿದರೆ ಸಾಕು ಲಕ್ಷಾಂತರ ಮತದಾರರು ಮತಗಟ್ಟೆಗೆ ಬಂದು ಕಾಂಗ್ರೆಸ್ ಪರವಾಗಿ ಮತ ಚಲಾಯಿಸುತ್ತಿದ್ದರು. ಅದೇ ರೀತಿ ಇಂದಿನ ಚುನಾವಣೆ ಬೂತ್ ಮಟ್ಟದ್ದಾಗಿದ್ದು ಅದಕ್ಕಾಗಿಯೇ ಪ್ರತಿ ಬೂತ್ ನಲ್ಲೂ ನಾವು ಇರಬೇಕು. ಪ್ರತಿ ಬೂತ್ ನಲ್ಲೂ ಸಾಕಷ್ಟು ಜನರನ್ನು ಹೊಂದಿರಬೇಕು ಎಂದು ಹೇಳಿದರು. 
ಇಂದು ರಾಜಕೀಯದಲ್ಲಿ ಹಲವು ಪಕ್ಷಗಳು ಪ್ರಮುಖ ಪಾತ್ರ ವಹಿಸುತ್ತಿವೆ ಮತ್ತು ಇದೀಗ ಹೆಚ್ಚಿನ ಪ್ರಾದೇಶಿಕ ಪಕ್ಷಗಳು ಮುಂಚೂಣಿಯಲ್ಲಿವೆ. ಆದರೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಮಾತ್ರ ರಾಷ್ಟ್ರೀಯ ಹೆಜ್ಜೆ ಗುರುತನ್ನು ಹೊಂದಿವೆ ಎಂದು ಚಿದಂಬರಂ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT