ಪಿ ಚಿದಂಬರಂ 
ದೇಶ

ಒಂದು ವೇಳೆ 'ಮುಕ್ತ ಭಾರತ' ಅಂತ ಇರೋದಾದ್ರೆ, ಅದು ಬಿಜೆಪಿ ಮುಕ್ತ: ಚಿದಂಬರಂ

ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ, ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಘೋಷಣೆಗೆ...

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ, ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಘೋಷಣೆಗೆ ಹೆದರಬೇಡಿ. ಒಂದು ವೇಳೆ ಮುಕ್ತ ಭಾರತ ಅಂತ ಇರೋದಾದರೆ ಅದು ಬಿಜೆಪಿ ಮುಕ್ತ ಭಾರತ ಅಂತ ಹೇಳಿದ್ದಾರೆ. 
ಭಾರತದಲ್ಲಿ ಕಾಂಗ್ರೆಸ್ ಪ್ರಶ್ನಾತೀತ ರಾಜಕೀಯ ಪಕ್ಷವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯದಲ್ಲಿ ಹಲವು ಬದಲಾವಣೆಗಳು ಆಗಿದ್ದು ಸದ್ಯ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಅಗತ್ಯವಿದೆ. ಮುಂದಿನ ಚುನಾವಣೆಗಳು ಪಕ್ಷವನ್ನು ತಳಮಟ್ಟವನ್ನು ಬಲಪಡಿಸುವ ಮೂಲಕ ಸ್ಪರ್ಧಿಸಬೇಕಿದೆ ಎಂದು ಕಾರ್ಯಕರ್ತರಿಗೆ ಚಿದಂಬರಂ ಧೈರ್ಯ ತುಂಬಿದರು. 
ಒಂದು ಕಾಲವಿತ್ತು ಅಂದು ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಹಾಗೂ ಇಂದಿರಾಗಾಂಧಿ ಹೆಸರನ್ನು ಹೇಳಿದರೆ ಸಾಕು ಲಕ್ಷಾಂತರ ಮತದಾರರು ಮತಗಟ್ಟೆಗೆ ಬಂದು ಕಾಂಗ್ರೆಸ್ ಪರವಾಗಿ ಮತ ಚಲಾಯಿಸುತ್ತಿದ್ದರು. ಅದೇ ರೀತಿ ಇಂದಿನ ಚುನಾವಣೆ ಬೂತ್ ಮಟ್ಟದ್ದಾಗಿದ್ದು ಅದಕ್ಕಾಗಿಯೇ ಪ್ರತಿ ಬೂತ್ ನಲ್ಲೂ ನಾವು ಇರಬೇಕು. ಪ್ರತಿ ಬೂತ್ ನಲ್ಲೂ ಸಾಕಷ್ಟು ಜನರನ್ನು ಹೊಂದಿರಬೇಕು ಎಂದು ಹೇಳಿದರು. 
ಇಂದು ರಾಜಕೀಯದಲ್ಲಿ ಹಲವು ಪಕ್ಷಗಳು ಪ್ರಮುಖ ಪಾತ್ರ ವಹಿಸುತ್ತಿವೆ ಮತ್ತು ಇದೀಗ ಹೆಚ್ಚಿನ ಪ್ರಾದೇಶಿಕ ಪಕ್ಷಗಳು ಮುಂಚೂಣಿಯಲ್ಲಿವೆ. ಆದರೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಮಾತ್ರ ರಾಷ್ಟ್ರೀಯ ಹೆಜ್ಜೆ ಗುರುತನ್ನು ಹೊಂದಿವೆ ಎಂದು ಚಿದಂಬರಂ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT