ಪಿಡಿಪಿ ಮುಖಂಡ 
ದೇಶ

ಮುಸ್ಲಿಂ ಹತ್ಯೆಗಳು ಮುಂದುವರೆದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ: ಪಿಡಿಪಿ ಮುಖಂಡ

ಮುಸ್ಲಿಂ ವಿರುದ್ಧದ ಸಾಮೂಹಿಕ ಹಲ್ಲೆ ಪ್ರಕರಣಗಳು ಮುಂದುವರೆದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಿಡಿಪಿ ಮುಖಂಡ ಮುಜಾಫರ್ ಹುಸೈನ್ ಬೇಗ್ ಎಚ್ಚರಿಕೆ ನೀಡಿದ್ದಾರೆ.

ಜಮ್ಮು-ಕಾಶ್ಮೀರ: ಮುಸ್ಲಿಂ ವಿರುದ್ಧದ ಸಾಮೂಹಿಕ ಹಲ್ಲೆ ಪ್ರಕರಣಗಳು ಮುಂದುವರೆದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಿಡಿಪಿ ಮುಖಂಡ ಮುಜಾಫರ್ ಹುಸೈನ್ ಬೇಗ್ ಎಚ್ಚರಿಕೆ ನೀಡಿದ್ದಾರೆ.

ಗೋವು, ಎಮ್ಮೆಗಳ ಹೆಸರಿನಲ್ಲಿ ಮುಸ್ಲಿಂರ ಹತ್ಯೆಗಳನ್ನು ನಿಲ್ಲಿಸಬೇಕಾಗುತ್ತದೆ. ಇಲ್ಲದಿದ್ದರೆ, ಫಲಿತಾಂಶ ಒಳ್ಳೇಯ ರೀತಿಯದ್ದಾಗಿರುವುದಿಲ್ಲ ಎಂದಿದ್ದಾರೆ.

ಶ್ರೀನಗರದಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜಸ್ತಾನದ ಆಳ್ವಾರ್ ನಲ್ಲಿ  ಗೋವುಗಳ ಕಳ್ಳರೆಂದು ಅನುಮಾನಿಸಿ ಅಕ್ಬರ್ ಖಾನ್ ಮೇಲೆ ಸಾಮೂಹಿಕ ಹಲ್ಲೆ ನಡೆಸಿ ಹತ್ಯೆಗೈದಿರುವ ಬಗ್ಗೆ ಮುಜಾಫರ್ ಹುಸೈನ್ ಬೇಗ್ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೂ ಮುಂಚೆ ಅಳ್ವಾರ್ ಜಿಲ್ಲೆಯಲ್ಲಿಯೇ  ಪೆಹುಲ್ ಖಾನ್ ಎಂಬುವರನ್ನು ಹತ್ಯೆ ಮಾಡಲಾಗಿತ್ತು. ಆದಾಗ್ಯೂ, ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸಾಮೂಹಿಕ ಹಲ್ಲೆಗಳಲ್ಲಿ ಪಾಲ್ಗೊಳ್ಳುವವರ ವಿರುದ್ಧ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕೇಂದ್ರ ಗೃಹ ಸಚಿವಾಯದ ಮಾಹಿತಿ ಪ್ರಕಾರ 2014 ಮಾರ್ಚ್ 3ರಿಂದ 2018ರವರೆಗೂ ದೇಶದ 9 ರಾಜ್ಯಗಳಲ್ಲಿ 40 ಸಾಮೂಹಿಕ ಹಲ್ಲೆ ಪ್ರಕರಣಗಳಲ್ಲಿ 45 ಮಂದಿ ಸಾವನ್ನಪ್ಪಿದ್ದಾರೆ. ಸಾಮೂಹಿಕ ಹಲ್ಲೆ  ಸಂಬಂಧ ಸೂಕ್ತ ಕಾನೂನು ರೂಪಿಸುವಂತೆ ಜುಲೈ 17 ರಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT