ರಾಮ್ ದಾಸ್ ಅಠಾವಳೆ 
ದೇಶ

ಎನ್ ಜಿಟಿ ಮುಖ್ಯಸ್ಥ ಸ್ಥಾನದಿಂದ ಎಕೆ ಗೊಯೆಲ್ ವಜಾಗೊಳಿಸುವಂತೆ ಅಠಾವಳೆ ಒತ್ತಾಯ

ಮಾಜಿ ಸುಪ್ರೀಂಕೋರ್ಟ್ ನ್ಯಾಯಾಧೀಶ ಎ. ಕೆ. ಗೊಯೆಲ್ ಅವರನ್ನು ಎನ್ ಜಿಟಿ ಮುಖ್ಯಸ್ಥ ಸ್ಥಾನದಿಂದ ವಜಾಗೊಳಿಸುವಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮ್ ದಾಸ್ ಅಠಾವಳೆ ಒತ್ತಾಯಿಸಿದ್ದಾರೆ.

ನವದೆಹಲಿ: ಪರಿಶಿಷ್ಟ ಜಾತಿ, ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸಂಬಂಧ ತಪ್ಪು ತೀರ್ಪು ನೀಡಿರುವ ಮಾಜಿ ಸುಪ್ರೀಂಕೋರ್ಟ್  ನ್ಯಾಯಾಧೀಶ ಎ. ಕೆ. ಗೊಯೆಲ್ ಅವರನ್ನು ಎನ್ ಜಿಟಿ ಮುಖ್ಯಸ್ಥ ಸ್ಥಾನದಿಂದ ವಜಾಗೊಳಿಸುವಂತೆ  ಕೇಂದ್ರ ಸಾಮಾಜಿಕ  ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮ್ ದಾಸ್ ಅಠಾವಳೆ ಒತ್ತಾಯಿಸಿದ್ದಾರೆ.

 ನಾನೂ ಕೂಡಾ ಎನ್ ಡಿಎ ಮೈತ್ರಿಕೂಟದ ಭಾಗವಾಗಿದ್ದೇನೆ. ಅವರು ದಲಿತರ ಭಾವನೆಗಳಿಗೆ ಧಕ್ಕೆ ತಂದಿದ್ದು, ಅವರು ಹೊಂದಿರುವ ಸ್ಥಾನದಿಂದ ಈ ಕೂಡಲೇ ವಜಾಗೊಳಿಸಬೇಕೆಂಬುದು ತಮ್ಮ ಬೇಡಿಕೆಯಾಗಿದೆ ಎಂದು ಅಠಾವಳೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಾಧೀಶರಾಗಿರುವ  ಎಕೆ ಗೊಯೆಲ್ ಅವರನ್ನು ಐದು ವರ್ಷಗಳ ಅವಧಿಯ ಎನ್ ಜಿ ಟಿ ಮುಖ್ಯಸ್ಥರಾಗಿ ಜುಲೈ 6 ರಂದು ನೇಮಕ ಮಾಡಲಾಗಿತ್ತು.

ಪರಿಶಿಷ್ಟ ಜಾತಿ, ಪಂಗಡ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಲ್ಲಿ ಯಾವುದೇ  ದೂರು ದಾಖಲಾದ ಕೂಡಲೇ  ಬಂಧಿಸಬಾರದೆಂದು  ಜುಲೈ 20 ರಂದು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿದ್ದ ಗೊಯೆಲ್ ಹಾಗೂ ಯುವಿ ಲಲಿತ್ ಅವರನ್ನೊಳಗೊಂಡ ಪೀಠ ನಿರ್ದೇಶ ನೀಡಿತ್ತು.

ಈ ತೀರ್ಪನ್ನು ಹಲವು ರಾಜಕೀಯ ಪಕ್ಷಗಳು ಹಾಗೂ ದಲಿತ ಸಮುದಾಯದಕ್ಕೆ ಸೇರಿದ ನಾಯಕರು ವಿರೋಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT