ಅಖಿಲೇಶ್ ಯಾದವ್ 
ದೇಶ

ಎಸ್ಪಿ ರಾಷ್ಟ್ರೀಯ ಕಾರ್ಯಕಾರಿಣಿ: ಲೋಕಸಭಾ ಸೀಟು ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳಲು ಅಖಿಲೇಶ್ ಗೆ ಅಧಿಕಾರ

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅಧಿಕಾರ ನೀಡಲಾಗಿದೆ ಎಂದು ಎಸ್ಪಿ ಮುಖಂಡ ರಾಮಗೋಪಾಲ್ ಯಾದವ್ ಹೇಳಿದ್ದಾರೆ.

ಲಖನೌ:  ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ   ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅಧಿಕಾರ ನೀಡಲಾಗಿದೆ ಎಂದು  ಎಸ್ಪಿ ಮುಖಂಡ  ರಾಮಗೋಪಾಲ್ ಯಾದವ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಇವಿಎಂ ಬಳಸದೆ  ಬ್ಯಾಲೆಟ್ ಕಾಗದದ ಮೂಲಕ ನಡೆಸುವಂತೆಯೂ ಕಾರ್ಯಕಾರಿಣಿಯಲ್ಲಿ  ಚರ್ಚಿಸಲಾಯಿತು ಎಂದು ಅವರು ತಿಳಿಸಿದರು.

ಮೊಹಮ್ಮದ್ ಅಜಾಮ್ ಖಾನ್ ಸೇರಿದಂತೆ ಮತ್ತಿತರ ನಾಯಕರು ಸಭೆಯಲ್ಲಿ ಗೈರಾದ ಬಗ್ಗೆ ಪ್ರತಿಕ್ರಿಯಿಸಿದ ರಾಮಗೋಪಾಲ್ ಯಾದವ್,  ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ  ಶೇ.90ರಷ್ಟು ಮಂದಿ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು.

ಕಾಗದ ಪತ್ರದಲ್ಲಿ ಚುನಾವಣೆ ನಡೆಸಬೇಕೆಂಬ ತಮ್ಮ ಬೇಡಿಕೆಯನ್ನು ಒಂದು ವೇಳೆ ಚುನಾವಣಾ ಆಯೋಗ ತಿರಸ್ಕರಿಸಿದರೆ ಎಸ್ಪಿ ನಾಯಕರು ಚುನಾವಣಾ ಆಯೋಗದ ಬಾಗಿಲು ಮುಂದೆ ಕುಳಿತು ಸತ್ಯಾಗ್ರಹ ನಡೆಸುವುದಾಗಿ ರಾಮಗೋಪಾಲ್ ಯಾದವ್ ತಿಳಿಸಿದರು.

ಮಹಾಮೈತ್ರಿಯಲ್ಲಿ ಯಾರು ನಾಯಕತ್ವ ವಹಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಯಾದವ್, ಕೇಂದ್ರಸರ್ಕಾರ 17 ಪಕ್ಷಗಳೊಂದಿಗೆ ನಡೆಯುತ್ತಿದೆ. ಅವರ ನಾಯಕ ನರೇಂದ್ರಮೋದಿ ಮಾತ್ರ. ಅದೇ ರೀತಿಯಲ್ಲಿ ಎಲ್ಲಾ ಪಕ್ಷಗಲು ತಮ್ಮ ನಾಯಕರನ್ನು ಹೊಂದಿವೆ ಎಂದು ಅವರು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT