ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ; ಕಂದಕಕ್ಕೆ ಉರುಳಿಬಿದ್ದ ಬಸ್- 25 ಸಾವು 
ದೇಶ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ; ಕಂದಕಕ್ಕೆ ಉರುಳಿಬಿದ್ದ ಬಸ್- 25 ಮೃತದೇಹಗಳು ಪತ್ತೆ

ಮಹಾರಾಷ್ಟ್ರದ ರಾಯ್ಗಢ ಜಿಲ್ಲೆಯಲ್ಲಿ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಮಂದಿ ಮೃತದೇಹಗಳನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

ರಾಯ್ಗಢ: ಮಹಾರಾಷ್ಟ್ರದ ರಾಯ್ಗಢ ಜಿಲ್ಲೆಯಲ್ಲಿ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಮಂದಿ ಮೃತದೇಹಗಳನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.
ಮಹಾರಾಷ್ಟ್ರದ ರಾಯ್ಗಢ ಜಿಲ್ಲೆಯಲ್ಲಿ ನಿನ್ನೆಯಷ್ಟೇ ಭೀಕರ ಅಪಘಾತ ಸಂಭವಿಸಿತ್ತು. ಕಂದಕಕ್ಕೆ ಬಸ್ ವೊಂದು ಉರುಳಿ ಬಿದ್ದ ಪರಿಣಾಮ 25 ಮಂದಿ ಸಾವನ್ನಪ್ಪಿರುವ ಸಾವನ್ನಪ್ಪಿದ್ದರು ಎಂದು ಹೇಳಲಾಗುತ್ತಿತ್ತು.  
ರಾಯ್ಗಢದ ಅಂಬೆನಲಿ ಘಾಟ್ ಬಳಿ ಘಟನೆ ನಡೆದಿತ್ತು. 500 ಅಡಿ ಆಳದ ಕಂದಕಕ್ಕೆ ಬಸ್ ಉರುಳಿ ಬಿದ್ದಿತ್ತು. ಬಸ್ ನಲ್ಲಿ 30 ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿತ್ತು. 
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, 25 ಮಂದಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆಂದು ತಿಳಿದುಬಂದಿದೆ. 
ಸ್ಥಳದಲ್ಲಿ ಇನ್ನು ಕೆಲವರ ಮೃತದೇಹಗಳಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಬಸ್ ಅವಶೇಷಗಳಲ್ಲಿ ಕೆಲವರ ಮೃತದೇಹಗಳಿರುವ ಶಂಕೆಗಳಿದ್ದು, ಪರಿಶೀಲನೆ ನಡೆಸಲಾಗುತ್ತದೆ ಎಂದು ಎನ್'ಡಿಆರ್'ಎಫ್ ಡೆಪ್ಯುಟಿ ಕಮಾಂಡೆಂಟ್ ವೈರವನಾಥನ್ ಅವರು ಹೇಳಿದ್ದಾರೆ.
ಚಾಲಕನ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕೇವಲ ಓರ್ವ ಪ್ರಯಾಣಿಕ ಮಾತ್ರ ಬದುಕುಳಿದಿದ್ದಾರೆಂದು ರಾಯ್ಗಢ ಸಚಿವ ರವೀಂದ್ರ ಚವನ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT