ವಿದ್ಯಾರ್ಥಿಗಳ ಎಳೆದಾಡಿದ ಪೊಲೀಸರು 
ದೇಶ

ಅಮಿತ್ ಶಾಗೆ ಕಪ್ಪು ಬಾವುಟ ಪ್ರದರ್ಶಿಸಿದ ಯುವತಿಯರ ಮೇಲೆ ಪೊಲೀಸರ ಹಲ್ಲೆ

ರ‍್ಯಾಲಿಯೊಂದರಲ್ಲಿ ಪಾಲ್ಗೊಳ್ಳಲು ಉತ್ತರ ಪ್ರದೇಶಕ್ಕೆ ತೆರಳಿದ್ದ ಬಿಜೆಪಿ ರಾಷ್ಟ್ರಾದ್ಯಕ್ಷ ಅಮಿತ್ ಶಾ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಇಬ್ಬರು ಯುವತಿಯರಿಗೆ ಪೊಲೀಸರು ಮನಬಂದಂತೆ ಥಳಿಸಿದ್ದಾರೆ.

 ಅಲಹಾಬಾದ್: ರ‍್ಯಾಲಿಯೊಂದರಲ್ಲಿ ಪಾಲ್ಗೊಳ್ಳಲು ಉತ್ತರ ಪ್ರದೇಶಕ್ಕೆ ತೆರಳಿದ್ದ ಬಿಜೆಪಿ ರಾಷ್ಟ್ರಾದ್ಯಕ್ಷ ಅಮಿತ್ ಶಾ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಇಬ್ಬರು ಯುವತಿಯರಿಗೆ ಪೊಲೀಸರು ಮನಬಂದಂತೆ ಥಳಿಸಿದ್ದಾರೆ.
ಅಲಹಾಬಾದ್ ನಲ್ಲಿ ಆಯೋಜನೆಯಾಗಿದ್ದ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಅಮಿತ್​ ಶಾ ತೆರಳುತ್ತಿದ್ದ ವೇಳೆ, ರಸ್ತೆ ಮಧ್ಯೆ ಕಪ್ಪು ಪಟ್ಟಿ ಪ್ರದರ್ಶಿಸಿ, ಸರ್ಕಾರದ ವಿರುದ್ಧ ಮತ್ತು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಈ ವೇಳೆ ಯುವತಿಯರನ್ನು ವಶಕ್ಕೆ ಪಡೆಯಲೆತ್ನಿಸಿದ ಪೊಲೀಸರು ಇಬ್ಬರು ವಿದ್ಯಾರ್ಥಿನಿಯರನ್ನು ಥಳಿಸಿದ್ದಾರೆ. ಅಂತೆಯೇ ಪುರುಷ ಪೊಲೀಸರು ಲಾಟಿಯಿಂದ ಥಳಿಸಿ ಕೂದಲು ಹಿಡಿದ ಎಳೆದಾಡಿದ ವಿಡಿಯೋ ಇದೀಗ ವೈರಲ್​ ಆಗಿದೆ. 
ತಕ್ಷಣ ಅಲ್ಲಿ ಭದ್ರತೆಗಿದ್ದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಹೀಗೆ ಬಂದಿಸುವಾಗ ಇಬ್ಬರು ಮಹಿಳೆಯರನ್ನು ಮಹಿಳಾ ಪೊಲೀಸರೇ ಬಂಧಿಸಬೇಕು ಎನ್ನುವ ನಿಯಮ ಪಾಲನೆಯಾಗಿಲ್ಲ. ಅಲ್ಲದೇ, ಓರ್ವ ಯುವತಿಗೆ ಪೊಲೀಸ್​ ಪೇದೆಯೊಬ್ಬ ಲಾಠಿಯಿಂದ ಥಳಿಸುತ್ತಾನೆ. ಮತ್ತೊಬ್ಬ ಜಡೆ ಹಿಡಿದು ಅವರನ್ನು ಜೀಪ್ ​ನೊಳಗೆ ದಬ್ಬುತ್ತಾನೆ. ಕೆಲವೇ ನಿಮಿಷದಲ್ಲಿ ನಡೆಯುವ ಈ ದೃಶ್ಯ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದೆ.
ಇನ್ನು ಯುವತಿಯರನ್ನು ಜೀಪ್ ನೊಳಗೆ ತಳ್ಳುವಾಗ ಒಬ್ಬ ಹಿರಿಯ ಪೊಲೀಸ್ ಅಧಿಕಾರಿ ಹೊಡೆಯಬೇಡಿ ಎಂದು ಕೂಗಿ ಹೇಳಿದರೂ ಯುವತಿಯನ್ನು ಜಡೆ ಹಿಡಿದು ಎಳೆದಾಡಿದ ಸಿಬ್ಬಂದಿಯ ಕ್ರಮವನ್ನ ಟೀಕಿಸಲಾಗುತ್ತಿದೆ.
ಬಂಧಿತರು ಸಮಾಜವಾದಿ ಪಕ್ಷದ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು
ಇನ್ನು ಪೊಲೀಸ್​ ವಿಚಾರಣೆ ನಂತರ ಆ ಮೂವರು ಸಮಾಜವಾದಿ ಪಾರ್ಟಿಯ ವಿದ್ಯಾರ್ಥಿ ಸಂಘಟನೆಯಾದ ಸಮಾಜವಾದಿ ಛಾತ್ರ ಸಭಾದ ಕಾರ್ಯಕರ್ತರು ಎಂದು ತಿಳಿದುಬಂದಿದೆ. ಬಂಧಿತ ವಿದ್ಯಾರ್ಥಿನಿಯರು 25 ವರ್ಷದ ನೇಹಾ ಯಾದವ್​ ಹಾಗೂ 24 ವರ್ಷದ ರಮಾ ಯಾದವ್​ ಎಂದು ಹೇಳಲಾಗಿದ್ದು, ಇವರು ಅಲಹಾಬಾದ್​​​ ಯ್ಯೂನಿವರ್ಸಿಟಿಯ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!