ಸಂಗ್ರಹ ಚಿತ್ರ 
ದೇಶ

ಬಿಹಾರ ನಿರಾಶ್ರಿತ ಶಿಬಿರ ಬಾಲಕಿಯರ ಅತ್ಯಾಚಾರ: ನರಕಯಾತನೆಯ ಕಹಿಸತ್ಯ ಬಿಚ್ಚಿಟ್ಟ ಸಂತ್ರಸ್ತ ಬಾಲಕಿ!

ಬಿಹಾರದ ಮುಜಫರ್ ಪುರ್ ಜಿಲ್ಲೆಯಲ್ಲಿನ ನಿರಾಶ್ರಿತ ಶಿಬಿರದ 34 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ...

ಪಾಟ್ನಾ: ಬಿಹಾರದ ಮುಜಫರ್ ಪುರ್ ಜಿಲ್ಲೆಯಲ್ಲಿನ ನಿರಾಶ್ರಿತ ಶಿಬಿರದ 34 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಅತ್ಯಾಚಾರ ಸಂತ್ರಸ್ತ ಬಾಲಕಿಯೊಬ್ಬಳು ಭಯಾನಕ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. 
ಸೇವಾ ಸಂಕಲ್ಪ ಇವಂ ಸಮಿತಿ ಎಂಬ ಸ್ವಯಂ ಸೇವಾ ಸಂಸ್ಥೆ ಈ ನಿರಾಶ್ರಿತ ಶಿಬಿರವನ್ನು ನಡೆಸುತ್ತಿದ್ದು ಬ್ರಿಜೇಶ್ ಕುಮಾರ್ ಠಾಕೂರ್ ಎಂಬಾತ ಇದರ ಮುಖ್ಯಸ್ಥನಾಗಿದ್ದ. ಈ ಸಂಬಂಧ ಬ್ರಿಜೇಶ್ ಸೇರಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 
ಈ ಶಿಬಿರದಲ್ಲಿ 7 ರಿಂದ 18 ವರ್ಷದೊಳಗಿನವರಾಗಿದ್ದು ಅವರಲ್ಲಿ ಹಲವರು ಬಾಲಕಿಯರು ಹಲವು ಸಮಸ್ಯೆಗಳಿಗೆ ತುತ್ತಾಗಿದ್ದಾರೆ. ಅತ್ಯಾಚಾರಕ್ಕೂ ಮುನ್ನ ಬಾಲಕಿಯರಿಗೆ ನೀಡಲಾಗುತ್ತಿದ್ದ ಆಹಾರದಲ್ಲಿ ಮಾದಕ ದ್ರವ್ಯ ಬೆರೆಸಿ ಕೊಡಲಾಗುತ್ತಿತ್ತು. ಕೆಲವೊಮ್ಮೆ ಊಟ ಕೊಡದೆ ಹಸಿವಿನಿಂದ ಬಳಲುವಂತೆ ಮಾಡಲಾಗುತ್ತಿತ್ತು. ರಾತ್ರಿ ಸಮಯದಲ್ಲಿ ಅತ್ಯಾಚಾರವೆಸಗಲಾಗುತ್ತಿತ್ತು ಎಂದು ಸಂತ್ರಸ್ತ ಬಾಲಕಿಯರು ಪೊಲೀಸ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. 
ನನ್ನ ಆಹಾರದಲ್ಲಿ ಅಮಲೇರಿಸುವ ಮಾದಕ ದ್ರವ್ಯ ಬೆರಸಿ ಕೊಡುತ್ತಿದ್ದರು. ಅಮಲೇರುತ್ತಿದ್ದಂತೆ ಆಯಾಗಳು ಬ್ರಿಜೇಷ್ ಸರ್(ಪ್ರಮುಖ ಆರೋಪಿ) ಕೋಣೆಯಲ್ಲಿ ಮಲಗುವಂತೆ ಹೇಳುತ್ತಿದ್ದರು. ಬೆಳಗೆದ್ದು ನೋಡಿದಾಗ ನನ್ನ ಬಟ್ಟೆಗಳೆಲ್ಲ ನೆಲದ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುತ್ತಿದ್ದವು. ಅಲ್ಲದೆ ನಮ್ಮ ದೇಹ ನೋವಿನಿಂದ ಕೂಡಿರುತ್ತಿತ್ತು ಎಂದು ಸಂತ್ರಸ್ತ ಬಾಲಕಿಯೊಬ್ಬಳು ಪೋಕ್ಸೋ ಕೋರ್ಟ್ ನಲ್ಲಿ ಹೇಳಿದ್ದಾಳೆ. 
ಅವರು ಹೇಳಿದಂತೆ ಕೇಳದಿದ್ದರೆ ನಮಗೆ ಥಳಿಸುತ್ತಿದ್ದರು. ನಮ್ಮ ಮೈಮೇಲೆ ಬಿಸಿ ನೀರು, ಎಣ್ಣೆ ಎರಚುತ್ತಿದ್ದರು. ಬ್ರಿಜೇಷ್ ಸರ್ ತಮ್ಮ ಕೋಣೆಗೆ ಕರೆದುಕೊಂಡು ಹೋಗಿ ಗುಪ್ತಾಂಗದ ಮೇಲೆ ಪರಚಿ ಗಾಯ ಮಾಡುತ್ತಿದ್ದರು. ಪ್ರತಿ ರಾತ್ರಿ ನಮ್ಮನ್ನು ಬೆಚ್ಚಿಬೀಳಿಸುವ ಕರಾಳ ರಾತ್ರಿಗಳಾಗಿಯೇ ಬರುತ್ತಿದ್ದವು. 
ಕಾಮುಕರಿಂದ ತಪ್ಪಿಸಿಕೊಳ್ಳಲು ನಾವು ಕೆಲವೊಮ್ಮೆ ಒಡೆದ ಗ್ಲಾಸ್ ನಿಂದ ಕೈ ಕಾಲುಗಳಿಗೆ ಗಾಯ ಮಾಡಿಕೊಳ್ಳುತ್ತಿದ್ದೇವು ಎಂದು ಹೇಳಿದ್ದಾಳೆ. 
ಈ ಕರ್ಮಕಾಂಡ ಬಯಲಿಗೆ ಬಂದ ನಂತರ ಮೊದಲಿಗೆ 29 ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ 34 ಬಾಲಕಿರ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ತಪಾಸಣೆಯಿಂದ ಬಹಿರಂಗಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT