ಸಾಂದರ್ಭಿಕ ಚಿತ್ರ 
ದೇಶ

ಬಿಹಾರ ಬಾಲಕಿಯರ ಮೇಲೆ ಅತ್ಯಾಚಾರ: ಮಹಿಳಾ ಸಿಬ್ಬಂದಿಯಿಂದಲೇ ಸೆಕ್ಸ್ ದಂಧೆ

ಬಿಹಾರದ ಮುಜಫರ್ ಪುರ್ ಜಿಲ್ಲೆಯಲ್ಲಿನ ನಿರಾಶ್ರಿತ ಶಿಬಿರದ 34 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಅಲ್ಲಿನ ಮಹಿಳಾ...

ಪಾಟ್ನಾ: ಬಿಹಾರದ ಮುಜಫರ್ ಪುರ್ ಜಿಲ್ಲೆಯಲ್ಲಿನ ನಿರಾಶ್ರಿತ ಶಿಬಿರದ 34 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಅಲ್ಲಿನ ಮಹಿಳಾ ಸಿಬ್ಬಂದಿಯೇ ಸಹಕರಿಸುತ್ತಿದ್ದರು ಎಂದು ಸಂತ್ರಸ್ತ ಬಾಲಕಿಯೊಬ್ಬರು ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಈಗಾಗಲೇ ಶಿಬಿರ ಏಳು ಮಹಿಳಾ ಸಿಬ್ಬಂದಿಯನ್ನು ಬಂಧಿಸಿದ್ದು, ಅವರು ಪುರುಷ ಸಿಬ್ಬಂದಿ ಮತ್ತು ಪುರುಷ ಸಂದರ್ಶಕರಿಗೆ ಬಾಲಕಿಯರ ಮೇಲೆ ಅತ್ಯಾಚಾರ ಎಸಗಲು ಅವಕಾಶ ಕಲ್ಪಿಸುತ್ತಿದ್ದರು ಮತ್ತು ರಾತ್ರಿ ವೇಳೆ ಬಾಲಕಿಯರನ್ನು ಹೊರಗಡೆ ಕರೆದೊಯ್ದು ದಂಧೆ ನಡೆಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಶಿಬಿರದಲ್ಲಿ 7 ರಿಂದ 18 ವರ್ಷದೊಳಗಿನ ಬಾಲಕಿಯರು ವಾಸಿಸುತ್ತಿದ್ದು, ಅವರನ್ನು ರಾತ್ರಿ ವೇಳೆ ಹೊರಗೆ ಕರೆದೊಯ್ದು, ಕಳೆದ ಮೂರು ವರ್ಷಗಳಿಂದ ಸೆಕ್ಸ್ ದಂಧೆ ನಡೆಸುತ್ತಿರುವ ಬಗ್ಗೆ ತನಿಖಾ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಸೇವಾ ಸಂಕಲ್ಪ ಇವಂ ಸಮಿತಿ ಎಂಬ ಸ್ವಯಂ ಸೇವಾ ಸಂಸ್ಥೆ ಮುಜಾಫರ್ ಫುರದ ಸಾಹು ರಸ್ತೆಯಲ್ಲಿರುವ ಈ ನಿರಾಶ್ರಿತ ಶಿಬಿರವನ್ನು ನಡೆಸುತ್ತಿದ್ದು, ಬ್ರಿಜೇಶ್ ಕುಮಾರ್ ಠಾಕೂರ್ ಎಂಬಾತ ಇದರ ಮುಖ್ಯಸ್ಥನಾಗಿದ್ದು,  ಬ್ರಿಜೇಶ್ ಸೇರಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 
ಈ ಶಿಬಿರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಇಂದು ಕುಮಾರಿ, ರಾತ್ರಿ ವೇಳೆ ಪುರುಷ ಸಂದರ್ಶಕರನ್ನು ಶಿಬಿರಕ್ಕೆ ಕರೆತರತ್ತಿದ್ದರು ಎನ್ನಲಾಗಿದೆ.
ಇನ್ನು ಸಂತ್ರಸ್ತ ಬಾಲಕಿಯರು ಪೊಲೀಸರ ಮುಂದೆ ಮತ್ತು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ನೀಡಿದ ಹೇಳಿಕೆ ಪ್ರಕಾರ, ಕಿರಣ್ ಆಂಟಿ ಮತ್ತು ಶಿಬಿರದಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ಚಂದಾ ಆಂಟಿ ಇಬ್ಬರು ನಮ್ಮನ್ನು ರಾತ್ರಿ ವೇಳೆ ಪ್ರತ್ಯೇಕ ರೂಮ್ ಗೆ ಕಳುಹಿಸುತ್ತಿದ್ದರು. ಅಲ್ಲಿ ಅಪರಿಚತ ವ್ಯಕ್ತಿಯೊಬ್ಬರು ಹಾಜರಿರುತ್ತಿದ್ದರು. ಅಲ್ಲದೆ ಬಟ್ಟೆಯಿಲ್ಲದೆ ಬೆಡ್ ಮೇಲೆ ಮಲಗುವಂತೆ ಸೂಚಿಸುತ್ತಿದ್ದರು ಎಂದು ಹೇಳಿದ್ದಾರೆ.
ಈ ಕರ್ಮಕಾಂಡ ಬಯಲಿಗೆ ಬಂದ ನಂತರ ಮೊದಲಿಗೆ 29 ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ 34 ಬಾಲಕಿರ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ತಪಾಸಣೆಯಿಂದ ಬಹಿರಂಗಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT