ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಪಳನಿಸ್ವಾಮಿ 
ದೇಶ

ಡಿಎಂಕೆ ಅಧಿನಾಯಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ: ಸಿಎಂ ಪಳನಿಸ್ವಾಮಿ

ಡಿಎಂಕೆ ಪಕ್ಷದ ಅಧಿನಾಯಕ ಎಂ ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಮಿಳುನಾಡು ಸಿಎಂ ಇ ಪಳನಿಸ್ವಾಮಿ ಹೇಳಿದ್ದಾರೆ.

ಚೆನ್ನೈ: ಡಿಎಂಕೆ ಪಕ್ಷದ ಅಧಿನಾಯಕ ಎಂ ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಮಿಳುನಾಡು ಸಿಎಂ ಇ ಪಳನಿಸ್ವಾಮಿ ಹೇಳಿದ್ದಾರೆ.
ಇಂದು ಬೆಳಗ್ಗೆ ಕಾವೇರಿ ಆಸ್ಪತ್ಪೆಗೆ ಭೇಟಿ ನೀಡಿದ ಪಳನಿಸ್ವಾಮಿ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಆಸ್ಪತ್ರೆ ವೈದ್ಯಾಧಿಕಾರಿಗಳು ಮತ್ತು ಕರುಣಾನಿಧಿ ಸಂಬಂಧಿಕರೊಂದಿಗೆ ಮಾತನಾಡಿದ ಅವರು ಮಾಹಿತಿ ಪಡೆದುಕೊಂಡರು. ಬಳಿಕ ಹೊರಗೆ ಬಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈಗಷ್ಟೇ ಕಾವೇರಿ ಆಸ್ಪತ್ರೆ ವೈದ್ಯಾದಿಕಾರಿಗಳ ಜೊತೆ ಮಾತನಾಡಿದೆ. ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಕಳೆದ ರಾತ್ರಿಗಿಂತಲೂ ಈಗ ಅವರ ಆರೋಗ್ಯ ಉತ್ತಮವಾಗಿದೆ. ಅವರು ಶೀಘ್ರ ಗುಣಮುಖರಾಗುವ ವಿಶ್ವಾಸವಿದೆ ಎಂದು ಹೇಳಿದರು.
ಅಂತೆಯೇ ಕರುಣಾನಿಧಿ ಅವರ ಆರೋಗ್ಯ ಮೇಲ್ವಿಚಾರಣೆಯನ್ನು ಸರ್ಕಾರವೇ ನೋಡಿಕೊಳ್ಳಲ್ಲಿದೆ ಎಂದು ಭರವಸೆ ನೀಡಿದರು.
ಇದೇ ವೇಳೆ ಉಪಸ್ಥಿತರಿದ್ದ ಎಐಎಡಿಎಂಕೆ ಮುಖಂಡರು ಕರುಣಾನಿಧಿ ಅವರನ್ನು ಹೊಗಳಿದರು. ಕರುಣಾನಿಧಿ ಅವರು ತಮಿಳು ಜನರ ನಾಯಕರು ಎಂದು ಹೇಳಿದರು,. ಅಂತೆಯೇ ಅವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರ ಮನೆಗೆ ವಾಪಸ್ ಆಗಲಿದ್ದಾರೆ ಎಂದು ಹೇಳಿದರು.
ಇನ್ನು 95 ವರ್ಷದ ಕರುಣಾನಿಧಿ ಅವರು ಅನಾರೋಗ್ಯಕ್ಕೀಡಾಗಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT