ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಪಳನಿಸ್ವಾಮಿ
ಚೆನ್ನೈ: ಡಿಎಂಕೆ ಪಕ್ಷದ ಅಧಿನಾಯಕ ಎಂ ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಮಿಳುನಾಡು ಸಿಎಂ ಇ ಪಳನಿಸ್ವಾಮಿ ಹೇಳಿದ್ದಾರೆ.
ಇಂದು ಬೆಳಗ್ಗೆ ಕಾವೇರಿ ಆಸ್ಪತ್ಪೆಗೆ ಭೇಟಿ ನೀಡಿದ ಪಳನಿಸ್ವಾಮಿ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಆಸ್ಪತ್ರೆ ವೈದ್ಯಾಧಿಕಾರಿಗಳು ಮತ್ತು ಕರುಣಾನಿಧಿ ಸಂಬಂಧಿಕರೊಂದಿಗೆ ಮಾತನಾಡಿದ ಅವರು ಮಾಹಿತಿ ಪಡೆದುಕೊಂಡರು. ಬಳಿಕ ಹೊರಗೆ ಬಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈಗಷ್ಟೇ ಕಾವೇರಿ ಆಸ್ಪತ್ರೆ ವೈದ್ಯಾದಿಕಾರಿಗಳ ಜೊತೆ ಮಾತನಾಡಿದೆ. ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಕಳೆದ ರಾತ್ರಿಗಿಂತಲೂ ಈಗ ಅವರ ಆರೋಗ್ಯ ಉತ್ತಮವಾಗಿದೆ. ಅವರು ಶೀಘ್ರ ಗುಣಮುಖರಾಗುವ ವಿಶ್ವಾಸವಿದೆ ಎಂದು ಹೇಳಿದರು.
ಅಂತೆಯೇ ಕರುಣಾನಿಧಿ ಅವರ ಆರೋಗ್ಯ ಮೇಲ್ವಿಚಾರಣೆಯನ್ನು ಸರ್ಕಾರವೇ ನೋಡಿಕೊಳ್ಳಲ್ಲಿದೆ ಎಂದು ಭರವಸೆ ನೀಡಿದರು.
ಇದೇ ವೇಳೆ ಉಪಸ್ಥಿತರಿದ್ದ ಎಐಎಡಿಎಂಕೆ ಮುಖಂಡರು ಕರುಣಾನಿಧಿ ಅವರನ್ನು ಹೊಗಳಿದರು. ಕರುಣಾನಿಧಿ ಅವರು ತಮಿಳು ಜನರ ನಾಯಕರು ಎಂದು ಹೇಳಿದರು,. ಅಂತೆಯೇ ಅವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರ ಮನೆಗೆ ವಾಪಸ್ ಆಗಲಿದ್ದಾರೆ ಎಂದು ಹೇಳಿದರು.
ಇನ್ನು 95 ವರ್ಷದ ಕರುಣಾನಿಧಿ ಅವರು ಅನಾರೋಗ್ಯಕ್ಕೀಡಾಗಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos