ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಉಗ್ರ ಸಂಘಟನೆಗೆ ಎಂಬಿಎ ವಿದ್ಯಾರ್ಥಿ ಸೇರ್ಪಡೆ

ಕಾಶ್ಮೀರ ಯುವಕರು ಉಗ್ರ ಸಂಘಟನೆಗಳಿಗೆ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಪುಲ್ವಾಮ ಜಿಲ್ಲೆಯ ಎಂಬಿಎ ವಿದ್ಯಾರ್ಥಿಯೊಬ್ಬ ಇದೀಗ ಉಗ್ರ ಸಂಘಟನೆಯೊಂದಕ್ಕೆ ಸೇರ್ಪಡೆಗೊಂಡಿದ್ದಾನೆಂದು ಹೇಳಲಾಗುತ್ತಿದೆ...

ಶ್ರೀನಗರ: ಕಾಶ್ಮೀರ ಯುವಕರು ಉಗ್ರ ಸಂಘಟನೆಗಳಿಗೆ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಪುಲ್ವಾಮ ಜಿಲ್ಲೆಯ ಎಂಬಿಎ ವಿದ್ಯಾರ್ಥಿಯೊಬ್ಬ ಇದೀಗ ಉಗ್ರ ಸಂಘಟನೆಯೊಂದಕ್ಕೆ ಸೇರ್ಪಡೆಗೊಂಡಿದ್ದಾನೆಂದು ಹೇಳಲಾಗುತ್ತಿದೆ. 
ಇಶ್ಫಕ್ ವಾನಿ (26) ದಕ್ಷಿಣ ಕಾಶ್ಮೀರದ ಕೊಯಿಲ್ ಗ್ರಾಮದ ಮೂಲದವರಾಗಿದ್ದು, ಪಾಕಿಸ್ತಾನ ಮೂಲಗ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಅಬು ತುರಾಬ್ ಎಂದ ಕೋಡ್ ಹೆಸರಿನೊಂದಿಗೆ ಸೇರ್ಪಡೆಗೊಂಡಿದ್ದಾನೆಂದು ಹೇಳಲಾಗುತ್ತಿದೆ. 
ಇಶ್ಫಕ್ ವಾನಿ ಎಕೆ.47 ಹಿಡಿದುಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇಶ್ಫಕ್ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದಾನೆಂದು ಹೇಳಲಾಗುತ್ತಿದೆ. 
ಇಶ್ಫಕ್ ಕುಟುಂಬ ಸದಸ್ಯರು ಜು.22 ರಂದು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಫೋಟೋ ಕುರಿತು ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದು, ಇಶ್ಫಕ್ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿರುವುದು ಖಚಿತವಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. 
ಯುವಕರು ಉಗ್ರ ಸಂಘಟನೆಗೆ ಸೇರ್ಪಡೆಗೊಂಡ ಬಳಿಕ ಶಸ್ತ್ರಾಸ್ತ್ರ ಹಿಡಿದು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು ಇತ್ತೀಚೆಗೆ ಸಾಮಾನ್ಯವಾಗಿ ಹೋಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹರಿಬಿಡುವ ಮೂಲಕ ತಾವು ಉಗ್ರ ಸಂಘಟನೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿರುವ ವಿಚಾರವನ್ನು ತಿಳಿಸುತ್ತಿದ್ದಾರೆ. 
ಉಗ್ರ ಸಂಘಟನೆಗಳಿಗೆ ಅನೇಕ ವಿದ್ಯಾವಂತ ಯುವಕರು, ಇಂಜಿನಿಯರ್ ಗಳು, ಎಂಬಿಎ ಪದವೀಧರರು ಹಾಗೂ ಸ್ನಾತಕೋತ್ತರ ಪದವೀದರರು ಸೇರ್ಪಡೆಗೊಳ್ಳುತ್ತಿದ್ದಾರೆಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT