ಅರವಿಂದ್ ಕೇಜ್ರಿವಾಲ್ 
ದೇಶ

ಸಿಸಿಟಿವಿ ಕುರಿತ ಲೆಫ್ಟಿನೆಂಟ್ ಗವರ್ನರ್‌ ವರದಿ ಹರಿದು ಹಾಕಿದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್‌ ನಡುವಿನ ಮುಸುಕಿನ...

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್‌ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದ್ದು, ದೆಹಲಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಬಗ್ಗೆ ಲೆಫ್ಟಿನೆಂಟ್‌ ಗವರ್ನರ್‌ ನೀಡಿದ ವರದಿಯನ್ನು ಸಿಎಂ ಕೇಜ್ರಿವಾಲ್ ವೇದಿಕೆಯಲ್ಲೇ ಹರಿದು ಹಾಕಿದ್ದಾರೆ.
ಇಂದು ನಗರದ ನಿವಾಸಿಗಳ ಕಲ್ಯಾಣ ಸಂಘಗಳು ಹಾಗೂ ಮಾರುಕಟ್ಟೆ ಸಂಘಗಳನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ, ಸ್ಥಳೀಯ ವ್ಯಕ್ತಿಗಳು ಸಿಸಿ ಟಿವಿ ಅಳವಡಿಸುವುದಾದರೆ ಲೈಸೆನ್ಸ್ ಪಡೆಯಬೇಕು ಎಂದು ಲೆಫ್ಟಿನೆಂಟ್‌ ಗವರ್ನರ್‌ ಹೇಳಿದ್ದಾರೆ. ಆದರೆ ಲೆಸೆನ್ಸ್ ಪಡೆಯಬೇಕೆಂದರೆ ಹಣ ಕೊಡಬೇಕು, ಇಂಥ ಹಣ ಪೀಕಿಸುವ ಆದೇಶವನ್ನು ಹರಿದು ಹಾಕಬೇಕು ಎಂದು ಹೇಳಿ ವೇದಿಕೆಯಲ್ಲೇ ಹರಿದು ಹಾಕಿದರು.
ಲೆಫ್ಟಿನೆಂಟ್ ಗವರ್ನರ್ ವರದಿಯನ್ನು ವಿರೋಧಿಸಿದ ಕೇಜ್ರಿವಾಲ್ ಅವರು, ಲೆಫ್ಟಿನೆಂಟ್ ಗವರ್ನರ್ ಸಮಿತಿಯಲ್ಲಿ ಪೊಲೀಸರಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಯಾರಾದರೂ ತಮ್ಮ ಸ್ವಂತ ಹಣದಲ್ಲಿ ಸಿಸಿಟಿವಿ ಅಳವಡಿಸಲು ಪೊಲೀಸರಿಂದ ಲೈಸೆನ್ಸ್ ಪಡೆಯಬೇಕು ಎಂದು ಆದೇಶಿಸಲಾಗಿದೆ. ಲೈಸೆನ್ಸ್  ಪಡೆಯಬೇಕೆಂದರೆ ಹಣ ಕೊಡಬೇಕು ಎಂದರ್ಥ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT