ಬಾಂಬೆ ಹೈಕೋರ್ಟ್ 
ದೇಶ

ಮಾಲೆಗಾಂವ್ ಸ್ಪೋಟ: ಇಬ್ಬರು ಆರೋಪಿಗಳ ಖುಲಾಸೆ ಅರ್ಜಿ ವಿಚಾರಣೆಗೆ ಬಾಂಬೆ ಹೈಕೋರ್ಟ್ ಸಮ್ಮತಿ

2008 ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಆರೊಪಿಗಳಾದ ಸಾಧ್ವಿ ಪ್ರಜ್ಞಾ ಸಿಂಗ್ ಮತ್ತು ಸಮೀರ್ ಕುಲಕರ್ಣಿ ಅವರ ಬಿಡುಗಡೆಗೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಬಾಂಬೆ ಹೈಕೋರ್ಟ್ ಸಮ್ಮತಿಸಿದೆ.

ಮುಂಬೈ: 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಆರೊಪಿಗಳಾದ ಸಾಧ್ವಿ ಪ್ರಜ್ಞಾ ಸಿಂಗ್ ಮತ್ತು ಸಮೀರ್ ಕುಲಕರ್ಣಿ ಅವರ ಬಿಡುಗಡೆಗೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಬಾಂಬೆ ಹೈಕೋರ್ಟ್ ಸಮ್ಮತಿಸಿದೆ.
ಪ್ರಕರಣದಲ್ಲಿ ಪ್ರಮುಖ ಆರೊಪಿಯಾಗಿದ್ದ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರ ಖುಲಾಸೆ ಅರ್ಜಿ ಒಪ್ಪಿಕೊಂಡ ನ್ಯಾಯಾಲಯದ ನಿಲುವಿನ ಬಳಿಕ ಈ ಅರ್ಜಿಗಳ ಪ್ರಸ್ತಾಪ ಬಂದಿದೆ.
"ಕರ್ನಲ್ ಪುರೋಹಿತ್ ಅವರ ಬಿಡುಗಡೆ ವಿಚಾರವಾಗಿ ಇದಾಗಲೇ ವಿಚಾರಣೆ ನಡೆಸುತ್ತಿರುವ ಬಾಂಬೆ ಹೈಕೋರ್ಟ್ ಇದೀಗ ಕೆಳ ನ್ಯಾಯಾಲಯದಿಂದ ತಿರಸ್ಕರಿಸಲ್ಪಟ್ಟ ಸಾಧ್ವಿ ಪ್ರಜ್ಞಾ ಸಿಂಗ್ ಅವರ ಮನವಿಯನ್ನು ಸಹ ಒಪ್ಪಿಕೊಂಡಿದೆ. ಆರೋಪಿಗಳ ಪರ ವಕೀಲರಾದ  ಪ್ರಶಾಂತ್ ಮಗ್ಗು ಎ ಎನ್ ಐ ಗೆ ತಿಳಿಸಿದ್ದಾರೆ.
ಅರ್ಜಿಗಳ ಜಂಟಿ ವಿಚಾರಣೆಯು ಆಗಸ್ಟ್ 13 ರಂದು ನಡೆಯಲಿದೆ.
ನಾಸಿಕ್ ನ ಮಾಲೆಗಾಂವ್ ಪಟ್ಟಣದಲ್ಲಿ ಸೆಪ್ಟೆಂಬರ್ 29, 2009 ಸಂಭವಿಸಿದ ಬಾಂಬ್ ಸ್ಪೋಟದಲ್ಲಿ  ಆರು ಜನರು ಮೃತಪಟ್ಟು  101 ಮಂದಿ ಗಾಯಗೊಂಡಿದ್ದರು.
ನವೆಂಬರ್ 2008 ರಲ್ಲಿ, ಭಯೋತ್ಪಾದನಾ ವಿರೋಧಿ ದಳ (ಎಟಿಎಸ್) ಪ್ರಕರಣ ಸಂಬಂಧ 11 ಜನರನ್ನು  ಬಂಧಿಸಿತ್ತು. ಆದರೆ ಏಪ್ರಿಲ್ 2011ರಲ್ಲಿ ಎಟಿಎಸ್ ತನಿಖೆಯನ್ನು ಎನ್ ಐಎಗೆ ವರ್ಗಾಯಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ