ಲೋಕಸಭೆಯಲ್ಲಿ ರಾಜನಾಥ್ ಸಿಂಗ್ 
ದೇಶ

ಎನ್ಆರ್'ಸಿ ಕಾರ್ಯ ನಡೆಸುತ್ತಿರುವುದು 'ಸುಪ್ರೀಂ' ನಿಗಾದಲ್ಲಿ, ಸರ್ಕಾರದ ಯಾವ ಪಾತ್ರವಿಲ್ಲ: ಲೋಕಸಭೆಯಲ್ಲಿ ಗೃಹ ಸಚಿವ

ಎನ್ಆರ್​ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಕರಡು ಕುರಿತ ಕಾರ್ಯಗಳು ನಡೆಯುತ್ತಿರುವುದು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ, ಇದರಲ್ಲಿ ಸರ್ಕಾರದ ಯಾವ ಪಾತ್ರವೂ ಇಲ್ಲ ಎಂದು ಲೋಕಸಭೆಯಲ್ಲಿ...

ನವದೆಹಲಿ: ಎನ್ಆರ್​ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಕರಡು ಕುರಿತ ಕಾರ್ಯಗಳು ನಡೆಯುತ್ತಿರುವುದು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ, ಇದರಲ್ಲಿ ಸರ್ಕಾರದ ಯಾವ ಪಾತ್ರವೂ ಇಲ್ಲ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. 
ಎನ್ಆರ್​ಸಿ ಕರಡು ಕುರಿತಂತೆ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ಟಿಎಂಸಿ ಸೇರಿದಂತೆ ಇನ್ನಿತರೆ ಪಕ್ಷಗಳು ತೀವ್ರವಾಗಿ ಕಿಡಿಕಾರುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಜನಾಥ್ ಸಿಂಗ್ ಅವರು, ಕರಡು ಕುರಿತ ಕಾರ್ಯದಲ್ಲಿ ಕೇಂದ್ರ ಸರ್ಕಾರದ ಯಾವ ಪಾತ್ರವೂ ಇಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ. 
ಎನ್ಆರ್'ಸಿ ಕರಡು ಕುರಿತಂತೆ ಸರ್ಕಾರದ ವಿರುದ್ಧ ಕಿಡಿಕಾರುತ್ತಿರುವ ವಿಪಕ್ಷಗಳನ್ನು ಒಂದು ಪ್ರಶ್ನೆ ಕೇಳಲು ಇಚ್ಛಿಸುತ್ತೇನೆ, ಎನ್'ಆರ್'ಸಿ ಕರಡಿನಲ್ಲಿ ಕೇಂದ್ರದ ಪಾತ್ರವೇನಿದೆ? ಎನ್'ಆರ್'ಸಿ ಕುರಿತ ಕಾರ್ಯಗಳು ನಡೆಸುತ್ತಿರುವುದು ಸುಪ್ರೀಂಕೋರ್ಟ್ ನಿಗಾದಲ್ಲಿ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಈ ವಿಚಾರದಲ್ಲಿ ಯಾವುದೇ ಪಕ್ಷಗಳೂ ರಾಜಕೀಯ ಮಾಡಬಾರದು ಎಂದು ಹೇಳಿದ್ದಾರೆ. 
ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿವೆ. ಇದೇನು ಅಂತಿಮ ಪಟ್ಟಿಯಲ್ಲ. ಕರಡು ಕುರಿತಂತೆ ಪ್ರತಿಕ್ರಿಯೆ ಹಾಗೂ ವಿರೋಧ ವ್ಯಕ್ತಪಡಿಸಲೂ ಅವಕಾಶವಿದೆ. ಹೀಗಾಗಿ ಯಾರೂ ಭೀತಿಗೊಳಗಾಗಬಾರದು ಎಂದಿದ್ದಾರೆ. 
ರಾಷ್ಟ್ರೀಯ ನಾಗರಿಕ ನೋಂದಣಿಯು ಇಡೀ ದೇಶಕ್ಕೆ ಸಂಬಂಧಿಸಿದ್ದು, ಇಡೀ ದೇಶದ ನಾಗರೀಕರ ಹೆಸರು ಇದರಲ್ಲಿರುತ್ತದೆ. ಆದರೆ, ಅಸ್ಸಾಂನಲ್ಲಿ ಅಕ್ರಮ ಬಾಂಗ್ಲಾದೇಶೀಯರ ಹಾವಳಿ ಅಧಿಕವಾಗಿರುವ ಕಾರಣ ಹಾಗೂ ಈ ವಿಷಯಕ್ಕೆ ಸಂಬಂಧಿಸಿದಂತೆ ಪದೇ ಪದೇ ಹಿಂಸಾಚಾರ ನಡೆಯುತ್ತಿರುವ ಕಾರಣ ಸುಪ್ರೀಂಕೋರ್ಟ್ ನಿಗಾದಲ್ಲಿ ಅಸ್ಸಾಂ ಸರ್ಕಾರ ರಾಜ್ಯದ ನಾಗರೀಕರ ಪ್ರತ್ಯೇಕ ನೋಂದಣಿ ಕೈಗೊಳ್ಳುತ್ತಿದೆ. 

ಅಸ್ಸಾಂ ರಾಜ್ಯದಲ್ಲಿ ಮೊದಲ ಕರಡು ಜ.1 ರಂದು ಬಿಡುಗಡೆಯಾಗಿತ್ತು. ಆಗ 3.29 ಕೋಟಿ ಅರ್ಜಿದಾರರಲ್ಲಿ 1.9 ಕೋಟಿ ಜನರ ಹೆಸರನ್ನು ಸೇರ್ಪಡೆಗೊಳಿಸಲಾಗಿತ್ತು. ಉಳಿದ 2 ಕೋಟಿ ಜನರ ಹಣೆಬರಹ ಇದೀಗ ತೀರ್ಮಾನವಾಗಲಿದೆ. ಹೀಗಾಗಿ ಅಕ್ರಮ ಬಾಂಗ್ಲಾದೇಶೀ ವಲಸಿಗರಿಗೆ ಇದು ಬಿಸಿಮುಟ್ಟಿಸುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. 

ಅಸ್ಸಾಂ ನಾಗರಿಕರ ನೋಂದಣಿಯಲ್ಲಿ ಹೆಸರು ಇರದೇ ಹೋದವರನ್ನು ಅವರವರ ದೇಶಕ್ಕೆ ಗಡೀಪಾರು ಮಾಡುವ ಸಾಧ್ಯತೆಗಳಿವೆ. ಅಸ್ಸಾಂನಲ್ಲಿ ನೇಪಾಳಿಗರು ಹಾಗೂ ಬಾಂಗ್ಲಾ ವಲಸಿಗರು ಇದ್ದು, ಇವರ ಮೂಲಗಳನ್ನು ಆಧರಿಸಿ ಆಯಾ ದೇಶಗಳಿಗೆ ಗಡೀಪಾರು ಮಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳುತ್ತದೆ. ಆದರೆ, ಇದಕ್ಕೂ ಮುನ್ನ ಆ ದೇಶಗಳ ಜೊತೆಗೆ ಗಡೀಪಾರು ಒಪ್ಪಂದ ಮಾಡಿಕೊಂಡಿರಬೇಕಾಗುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT