ಸಂಗ್ರಹ ಚಿತ್ರ 
ದೇಶ

ಭಾರತದಾದ್ಯಂತ 10 ಲಕ್ಷಕ್ಕಿಂತಲೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ!

ದೇಶದ ಪ್ರಾಥಮಿಕ ಹಾಗು ಮಾದ್ಯಮಿಕ ಶಾಲಾ ಮಟ್ಟದಲ್ಲಿ ಒಟ್ಟಾರೆ 10 ಲಕ್ಷಕ್ಕಿಂತ ಹೆಚ್ಚು ಶಿಕ್ಷಕ ಹುದ್ದೆ ಖಾಲಿ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನವದೆಹಲಿ: ದೇಶದ ಪ್ರಾಥಮಿಕ ಹಾಗು ಮಾದ್ಯಮಿಕ ಶಾಲಾ ಮಟ್ಟದಲ್ಲಿ ಒಟ್ಟಾರೆ 10 ಲಕ್ಷಕ್ಕಿಂತ ಹೆಚ್ಚು ಶಿಕ್ಷಕ ಹುದ್ದೆ ಖಾಲಿ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಮಾರ್ಚ್ 31, 2017 ರವರೆಗೂ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆ ಪಟ್ಟಿಯಲ್ಲಿ ಉತ್ತರ ಪ್ರದೇಶ ಪ್ರಥಮ ಸ್ಥಾನದಲ್ಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮಾದ್ಯಮಿಕ ಶಾಲಾ ಶಿಕ್ಷಕರ ಕೊರತೆ ಅತ್ಯಧಿಕವಾಗಿದೆ. ಕೇಂದ್ರಾಡಳಿತ ಪ್ರದೇಶಗಳಲ್ಲಿ ಶಿಕ್ಷಕರ ಕೊರತೆ ಬಹು ದೊಡ್ಡ ಸಮಸ್ಯೆಯಾಗಿದೆ.
ಅನುಮತಿ ನೀಡಿದ್ದ ಒಟ್ಟು 51,03,539 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಲ್ಲಿ 9,00,316 ಹುದ್ದೆಗಳು ಖಾಲಿ ಇದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಉಪೇಂದ್ರ ಕುಶ್ವಹಾ ಇಂದು ಸಂಸತ್ತಿಗೆ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಒಟ್ಟು ಹುದ್ದೆ  7,59,828 ಅಷ್ಟಿದ್ದು ಇದರಲ್ಲಿ  2,24,327 ಹುದ್ದೆಗಳು ಖಾಲಿಯಾಗಿವೆ.ಎರಡನೇ ಸ್ಥಾನದಲ್ಲಿ ಬಿಹಾರವಿದ್ದು ಇಲ್ಲಿ 5,92,514  ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿದ್ದು ಇದರಲ್ಲಿ 2,03,934 ಹುದ್ದೆಗಳು ಖಾಲಿ ಉಳಿದಿದೆ.
ಆದರೆ ಸಿಕ್ಕಿಂ, ಗೋವಾ, ಒಡಿಶಾ ರಾಜ್ಯಗಳಲ್ಲಿ ಅನುಮತಿಸಲ್ಪಟ್ಟ ಶಿಕ್ಷಕರ ಹುದ್ದೆಗಳೆಲ್ಲವೂ ಭರ್ತಿಯಾಗಿದು ಪ್ರಾಥಮಿಕ ಶಾಲಾ ಮಟ್ಟದ ಯಾವ ಶಿಕ್ಷಕರ ಹುದ್ದೆ ಖಾಲಿಯಾಗಿಲ್ಲ ಎಂದು ಸಚಿವರು ಮಾಹಿತಿ ನಿಡಿದ್ದಾರೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು ದೇಶದಾದ್ಯಂತ ಮಾದ್ಯಮಿಕ ಶಾಲೆ ಶಿಕ್ಷಕರ ಒಟ್ಟು ಹುದ್ದೆಗಳು 6,85,895  ಅಷ್ತಿದ್ದು ಇದರಲ್ಲಿ 1,07,689 ಹುದ್ದೆಗಳು ಖಾಲಿಯಾಗಿದೆ ಎಂದರು. ಜಮ್ಮು ಕಾಶ್ಮೀರದಲ್ಲಿ ಅನುಮತಿಸಲಾದ 25,657 ಮಾದ್ಯಮಿಕ ಶಿಕ್ಷಕರ ಹುದ್ದೆಗಳಲ್ಲಿ 21,221  ಹುದ್ದೆಗಳು ಖಾಲಿ ಇದೆ.
ಬಿಹಾರದಲ್ಲಿ 48,468ಮಾದ್ಯಮಿಕ ಶಿಕ್ಷಕರ ಹುದ್ದೆಗಳಿದ್ದು ಇದರಲ್ಲಿ 17,154 ಶಿಕ್ಷಕರ ಹುದ್ದೆ ಖಾಲಿ ಇದೆ.
ರಾಜಸ್ಥಾನ, ದಿಯು ದಮನ್, ಅಂಡಮಾನ್ ನಿಕೋಬಾರ್, ಆಂಧ್ರ ಪ್ರದೇಶ, ಮಣಿಪುರ, ಮಿಜೋರಾಂ ರಾಜ್ಯಗಳಲ್ಲಿ ಮಾದ್ಯಮಿಕ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT