ಸಾಂದರ್ಭಿಕ ಚಿತ್ರ 
ದೇಶ

ಬೆಳೆ ವಿಮೆ ಪಾವತಿಸಲು ವಿಫಲವಾದರೆ, ಕಂಪನಿಗಳು ಬಡ್ಡಿ ಸಮೇತ ನೀಡಬೇಕು: ಕೇಂದ್ರ

ಕಂಪನಿಗಳು ಬೆಳೆ ವಿಮೆ ಹಣವನ್ನು ಎರಡು ತಿಂಗಳಲ್ಲೇ ಪಾವತಿ ಮಾಡಬೇಕು. ಒಂದು ವೇಳೆ ವಿಳಂಬವಾದರೆ ಬಡ್ಡಿ ಸಮೇತ...

ನವದೆಹಲಿ: ಕಂಪನಿಗಳು ಬೆಳೆ ವಿಮೆ ಹಣವನ್ನು ಎರಡು ತಿಂಗಳಲ್ಲೇ ಪಾವತಿ ಮಾಡಬೇಕು. ಒಂದು ವೇಳೆ ವಿಳಂಬವಾದರೆ ಬಡ್ಡಿ ಸಮೇತ ರೈತರಿಗೆ ಹಣ ಪಾವತಿಸಬೇಕು ಎಂದು ಕೇಂದ್ರ ಕೃಷಿ ಸಚಿವ ರಾಧಾಮೋಹನ್ ಸಿಂಗ್ ಅವರು ಹೇಳಿದ್ದಾರೆ.
ಕೃಷಿಗೆ ಸಂಬಂಧಿಸಿದ ಅಪಾಯಗಳನ್ನು ತಡೆಯುವುದಕ್ಕಾಗಿ ಕೇಂದ್ರ ಸರ್ಕಾರ 2016ರಿಂದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೆ ತಂದಿದೆ ಎಂದು ಸಿಂಗ್ ಇಂದು ಲೋಕಸಭೆಗೆ ತಿಳಿಸಿದರು.
ಈ ಯೋಜನೆ ಅಡಿ ಅನಿರೀಕ್ಷಿತ ಘಟನೆಗಳು ಮತ್ತು ಪ್ರಕೃತಿ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟಕ್ಕೆ ವಿಮಾ ಕಂಪನಿಗಳು ಸಕಾಲಕ್ಕೆ ಪರಿಹಾರ ನೀಡಬೇಕು. ಸಂಪೂರ್ಣ ಬೆಳೆಗೆ ವಿಮಾ ರಕ್ಷಣೆ ಒದಗಿಸಲಾಗಿದ್ದು, ವಿಮಾ ಮೊತ್ತವನ್ನು ಕಡಿಮೆಗೊಳಿಸುವ ಅಥವಾ ಮೊಟಕುಗೊಳಿಸುವಂತಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ವಿಮಾ ಕಂಪನಿಗಳು ಎರಡು ತಿಂಗಳೊಳಗೆ ರೈತರಿಗೆ ಬೆಳೆ ವಿಮೆ ಹಣ ಪಾವತಿಸದಿದ್ದರೆ. ನಂತರ ಶೇ.12ರಷ್ಟು ಬಡ್ಡಿ ಸಮೇತ ಪಾವತಿಸಬೇಕು ಎಂದು ರಾಧಾಮೋಹನ್ ಸಿಂಗ್ ಅವರು ಪ್ರಶ್ನೋತ್ತರ ಅವಧಿಯಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT