ಸಾಂದರ್ಭಿಕ ಚಿತ್ರ 
ದೇಶ

ಎನ್ಆರ್​ಸಿ ಪಟ್ಟಿಯಿಂದ ಹೊರಗುಳಿದವರ ಮೇಲೆ ಯಾವುದೇ ದಬ್ಬಾಳಿಕೆಯ ಕ್ರಮ ಬೇಡ: ಸುಪ್ರೀಂ ಆದೇಶ

ಅಸ್ಸಾಂ ನಾಗರಿಕ ರಾಷ್ಟ್ರೀಯ ನೊಂದಣಿ (ಎನ್ಆರ್​ಸಿ) ಅಂತಿಮ ಕರಡು ಪಟ್ಟಿಯಿಂದ ಹೊರಗುಳಿದಿರುವ ಎಲ್ಲಾ ೪೦ ಲಕ್ಷ ಜನರ ವಿರುದ್ಧ...

ನವದೆಹಲಿ: ಅಸ್ಸಾಂ ನಾಗರಿಕ ರಾಷ್ಟ್ರೀಯ ನೊಂದಣಿ (ಎನ್ಆರ್​ಸಿ) ಅಂತಿಮ ಕರಡು ಪಟ್ಟಿಯಿಂದ ಹೊರಗುಳಿದಿರುವ ಎಲ್ಲಾ 40 ಲಕ್ಷ ಜನರ ವಿರುದ್ಧ ಯಾವುದೇ ದಬ್ಬಾಳಿಕೆ ಕ್ರಮ ಅನುಸರಿಸಬಾರದು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.
ಇದಲ್ಲದೆ ಪಟ್ಟಿಯಿಂದ ಹೊರಗುಳಿದವರ ಆಕ್ಷೇಪಣೆ, ಅಹವಾಲುಗಳ ನಿರ್ವಹಣೆಗಾಗಿ ನ್ಯಾಯೋಚಿತ ಮಾರ್ಗವನ್ನು ಕಂಡುಹಿಡಿಯಬೇಕೆಂದು ಕೋರ್ಟ್ ಸೂಚಿಸಿದೆ.. ಅಲ್ಲದೆ ಎನ್ಆರ್​ಸಿ ಸಂಬಂಧ ಕೇಂದ್ರ ಅನುಸರಿಸುವ ಪ್ರಾಮಾಣಿಕ ಕಾರ್ಯಕಾರಿ ವಿಧಾನ (ಎಸ್ ಒಪಿ) ಕುರಿತಂತೆ ಒಂದು ವರದಿ ಸಲ್ಲಿಸುವಂತೆ ಸಹ ನ್ಯಾಯಾಲಯ ಕೇಂದ್ರಕ್ಕೆ ನಿರ್ದೇಶಿಸಿದೆ.
ನ್ಯಾಯಮೂರ್ತಿಗಳಾದ  ರಂಜನ್ ಗೊಗೊಯ್ ಮತ್ತು ಆರ್ ಎಫ್ ನಾರಿಮನ್ ಅವರನ್ನೊಳಗೊಂಡ ಪೀಠವು ಕೇಂದ್ರವು ಆಗಸ್ಟ್ 16 ರೊಳಗೆ ಎಸ್ಒಪಿಯನ್ನು ಮಂಡಿಸಬೇಕು. ಆಕ್ಷೇಪಣೆ, ಅಹವಾಲುಗಳ ಸಲ್ಲಿಸುವವರಿಗಾಗಿ ಸ್ಥಳೀಯ ರಿಜಿಸ್ಟ್ರಾರ್ ಗಳು ನೋಟೀಸ್ ನೀಡಬೇಕು.ಅವರುಗಳಿಗೆ ನ್ಯಾಯೋಚಿತವಾಗಿರುವ ಅವಕಾಶ ಕಲ್ಪಿಸಬೇಕು ಎಂದು ಹೇಳಿದೆ.
ಹಜೀಲಾ ಮಾತನಾಡಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 28 ರವರೆಗೆ ಎನ್ಆರ್​ಸಿ  ಮತ್ತು ಹೊರಗಿಡುವಿಕೆಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳು ಸಲ್ಲಿಕೆಗೆ ಅವಕಾಶವಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆಗಸ್ಟ್ 7 ರವರೆಗೆ ಎನ್ಆರ್​ಸಿ   ಪಟ್ಟಿಯಲ್ಲಿತಮ್ಮ ಹೆಸರು ಇದೆಯೆ, ಇಲ್ಲವೆ ನೋಡಲು ಜನರಿಗೆ ಅವಕಾಶ ಲಭಿಸುತ್ತದೆ ಎಂದು ಅವರು ಹೇಳಿದ್ದಾರೆ. 
ಸಚಿವಾಲಯವು ಎಸ್ಒಪಿಯ ವಿಧಾನಗಳನ್ನು ರೂಪಿಸಲು ಸಿದ್ಧವಾಗಿದೆ ಎಂದಾದರೆ ಎಸ್ಒಪಿಯನ್ನು ನ್ಯಾಯಾಲಯದ ಮುಂದಿಡುವಂತೆ ಅಟಾರ್ನಿ ಜನರಲ್ ಅವರಿಗೆ ನ್ಯಾಯಪೀಠ ಹೇಳಿದೆ.
ರಾಜ್ಯ ನಾಗರಿಕರ ಪಟ್ಟಿಯಾದ ಎನ್ಆರ್​ಸಿ ಎರಡನೇ ಮತ್ತು ಅಂತಿಮ ಕರಡು ನಿನ್ನೆ ಪ್ರಕ್ಕಟವಾಗಿದ್ದು ಇದರಲ್ಲಿ ಅಸ್ಸಾಂನ 3.29 ಕೋಟಿ ಅರ್ಜಿದಾರರಲ್ಲಿ 2.89 ಕೋಟಿ ಜನರ ಹೆಸರು ಪ್ರಕಟವಾಗಿತ್ತು.ಸುಮಾರು 40.07 ಲಕ್ಷ ಅಭ್ಯರ್ಥಿಗಳ ಹೆಸರು ಪಟ್ಟಿಯಿಂದ ಹೊರಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT