ಸಾಂದರ್ಭಿಕ ಚಿತ್ರ 
ದೇಶ

ಆದಾಯ ತೆರಿಗೆ ಇಲಾಖೆಗೆ ಮಾಹಿತಿ ತಿಳಿಸಿ, 5 ಕೋಟಿ ರೂ. ಆದಾಯ ಗಳಿಸಿ

ಬೇನಾಮಿ ಆಸ್ತಿ , ವ್ಯವಹಾರದ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಸೂಕ್ತ ಮಾಹಿತಿ ನೀಡಿದ್ದರೆ, ಒಂದು ಕೋಟಿ ರೂಪಾಯಿ ಆದಾಯ ಗಳಿಸಬಹುದಾಗಿದೆ. ಅಲ್ಲದೇ ವಿದೇಶದಲ್ಲಿ ಬಚ್ಚಿಡಲಾಗಿರುವ ಕಪ್ಪುಹಣದ ಬಗ್ಗೆ ಮಾಹಿತಿ ನೀಡಿದ್ದರೆ, 5 ಕೋಟಿ ಆದಾಯ ಗಳಿಸಬಹುದಾಗಿದೆ.

ನವದೆಹಲಿ: ಬೇನಾಮಿ ಆಸ್ತಿ  , ವ್ಯವಹಾರದ ಬಗ್ಗೆ  ಆದಾಯ ತೆರಿಗೆ ಇಲಾಖೆಗೆ  ಸೂಕ್ತ ಮಾಹಿತಿ ನೀಡಿದ್ದರೆ,  ಒಂದು ಕೋಟಿ  ರೂಪಾಯಿ ಆದಾಯ ಗಳಿಸಬಹುದಾಗಿದೆ.  ಅಲ್ಲದೇ ವಿದೇಶದಲ್ಲಿ ಬಚ್ಚಿಡಲಾಗಿರುವ ಕಪ್ಪುಹಣದ ಬಗ್ಗೆ ಮಾಹಿತಿ ನೀಡಿದ್ದರೆ, 5 ಕೋಟಿ ಆದಾಯ ಗಳಿಸಬಹುದಾಗಿದೆ.

ಆದಾಯ ತೆರಿಗೆ ಕಾಯ್ದೆ 1961 ರ ಅಡಿಯಲ್ಲಿ ಭಾರತದಲ್ಲಿ ಆದಾಯ ಅಥವಾ ಆಸ್ತಿಗಳ ಮೇಲೆ ತೆರಿಗೆ ಗಣನೀಯವಾಗಿ ತಪ್ಪಿಸಿಕೊಳ್ಳುವುದು ತಡೆಯಲು ಮಾಹಿತಿ  ನೀಡುವವರಿಗೆ  50 ಲಕ್ಷ ರೂಪಾಯಿ ಬಹುಮಾನ ನೀಡುವ  ಆದಾಯ ತೆರಿಗೆ ಮಾಹಿತಿ ಪುರಸ್ಕಾರ ಯೋಜನೆಗೆ ತಿದ್ದುಪಡಿ  ತರಲಾಗಿದೆ.

ಬೇನಾಮಿ ವ್ಯವಹಾರ ಮಾಹಿತಿ ಪುರಸ್ಕಾರ ಯೋಜನೆ 2018ರ ಅಡಿಯಲ್ಲಿ ವಿದೇಶಿಗರು ಸೇರಿದಂತೆ ಯಾವುದೇ ವ್ಯಕ್ತಿ, ಬೆನಾಮಿ ಆಸ್ತಿ, ವ್ಯವಹಾರದ ಬಗ್ಗೆ   ಜಂಟಿ ಅಥವಾ  ಹೆಚ್ಚುವರಿ ಆಯುಕ್ತರಿಗೆ ಮಾಹಿತಿ ನೀಡಬಹುದಾಗಿದೆ.

ಬೇನಾಮಿ ಆಸ್ತಿ ವ್ಯವಹಾರದ ಬಗ್ಗೆ  ಜನರು ಮಾಹಿತಿ ನೀಡುವುದನ್ನು ಪ್ರೋತ್ಸಾಹಿಸುವುದು  ಪುರಸ್ಕಾರ ಯೋಜನೆಯ ಉದ್ದೇಶವಾಗಿದೆ. ಅಂತಹ ಆಸ್ತಿಗಳಿಂದ  ಆದಾಯ ಗಳಿಸಬಹುದಾಗಿದೆ ಹೇಳಲಾಗಿದೆ.
ಬೇನಾಮಿ ವ್ಯವಹಾರ ಮಾಹಿತಿ ಪುರಸ್ಕಾರ ಯೋಜನೆ-2018ರ ಅಡಿಯಲ್ಲಿ ಬೇನಾಮಿ ಆಸ್ತಿ, ವ್ಯವಹಾರದ ಬಗ್ಗೆ   ಸೂಕ್ತ  ಮಾಹಿತಿ ನೀಡುವ ವ್ಯಕ್ತಿಗೆ 1 ಕೋಟಿ ರೂಪಾಯಿ ಬಹುಮಾನ ನೀಡಲಾಗುವುದು , ಅಂತಹ ಆಸ್ತಿಗಳನ್ನು  ಬೇನಾಮಿ ವ್ಯವಹಾರ ( ನಿರ್ಬಂಧ)  ತಿದ್ದುಪಡಿ ಕಾಯ್ದೆ 2016ರ ಪ್ರಕಾರ  ಹರಾಜು  ಹಾಕಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಮಾಹಿತಿ ನೀಡಿದ ವ್ಯಕ್ತಿಯ ಹೆಸರನ್ನು ಎಲ್ಲಿಯೂ ಬಹಿರಂಗಪಡಿಸುವುದಿಲ್ಲ, ಬಹುಮಾನ ಯೋಜನೆಯನ್ನು ಗೌಪ್ಯವಾಗಿಡಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಭರವಸೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ- ನ್ಯೂಜಿಲೆಂಡ್ 'ಮುಕ್ತ ವ್ಯಾಪಾರ ಒಪ್ಪಂದ' ಅಂತಿಮ: ಭಾರಿ ಪ್ರಮಾಣದ ಸುಂಕ ಕಡಿತ! Video

ಪುಟಿನ್‌ಗೆ ದೊಡ್ಡ ಹಿನ್ನಡೆ: ಮಾಸ್ಕೋ ಕಾರ್ ಬಾಂಬ್ ಸ್ಫೋಟದಲ್ಲಿ ರಷ್ಯಾದ ಜನರಲ್ ಸಾವು; ಉಕ್ರೇನ್‌ ಕೈವಾಡ ಶಂಕೆ!

ಸ್ಯಾಂಡಲ್ ವುಡ್ ನಲ್ಲಿ 'ಫ್ಯಾನ್ಸ್' ವಾರ್ ! 2011ರ ಹಳೆಯ 'ಫೋಟೋ ವೈರಲ್' ಮಾಡಿ, ವಿಜಯಲಕ್ಷ್ಮಿಗೆ ತಿರುಗೇಟು ಕೊಟ್ಟ ಕಿಚ್ಚನ ಅಭಿಮಾನಿಗಳು

Bangladesh Violence: ಉಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೇ ಬಾಂಗ್ಲಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ನಾಯಕನ ತಲೆಗೆ ಗುಂಡಿಕ್ಕಿದ ಅನಾಮಿಕರು!

ಶುಭಮನ್ ಗಿಲ್‌ರನ್ನು ತಂಡದಿಂದ ಕೈಬಿಡುವುದು 'ಅಗತ್ಯ'; ಸೂರ್ಯಕುಮಾರ್ ಯಾದವ್‌ಗೆ ಸ್ಥಾನ ನೀಡಿದ್ದು ಏಕೆ? ಕಾರಣ ಇಲ್ಲಿದೆ...

SCROLL FOR NEXT