ಸಾಂದರ್ಭಿಕ ಚಿತ್ರ 
ದೇಶ

ಆದಾಯ ತೆರಿಗೆ ಇಲಾಖೆಗೆ ಮಾಹಿತಿ ತಿಳಿಸಿ, 5 ಕೋಟಿ ರೂ. ಆದಾಯ ಗಳಿಸಿ

ಬೇನಾಮಿ ಆಸ್ತಿ , ವ್ಯವಹಾರದ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಸೂಕ್ತ ಮಾಹಿತಿ ನೀಡಿದ್ದರೆ, ಒಂದು ಕೋಟಿ ರೂಪಾಯಿ ಆದಾಯ ಗಳಿಸಬಹುದಾಗಿದೆ. ಅಲ್ಲದೇ ವಿದೇಶದಲ್ಲಿ ಬಚ್ಚಿಡಲಾಗಿರುವ ಕಪ್ಪುಹಣದ ಬಗ್ಗೆ ಮಾಹಿತಿ ನೀಡಿದ್ದರೆ, 5 ಕೋಟಿ ಆದಾಯ ಗಳಿಸಬಹುದಾಗಿದೆ.

ನವದೆಹಲಿ: ಬೇನಾಮಿ ಆಸ್ತಿ  , ವ್ಯವಹಾರದ ಬಗ್ಗೆ  ಆದಾಯ ತೆರಿಗೆ ಇಲಾಖೆಗೆ  ಸೂಕ್ತ ಮಾಹಿತಿ ನೀಡಿದ್ದರೆ,  ಒಂದು ಕೋಟಿ  ರೂಪಾಯಿ ಆದಾಯ ಗಳಿಸಬಹುದಾಗಿದೆ.  ಅಲ್ಲದೇ ವಿದೇಶದಲ್ಲಿ ಬಚ್ಚಿಡಲಾಗಿರುವ ಕಪ್ಪುಹಣದ ಬಗ್ಗೆ ಮಾಹಿತಿ ನೀಡಿದ್ದರೆ, 5 ಕೋಟಿ ಆದಾಯ ಗಳಿಸಬಹುದಾಗಿದೆ.

ಆದಾಯ ತೆರಿಗೆ ಕಾಯ್ದೆ 1961 ರ ಅಡಿಯಲ್ಲಿ ಭಾರತದಲ್ಲಿ ಆದಾಯ ಅಥವಾ ಆಸ್ತಿಗಳ ಮೇಲೆ ತೆರಿಗೆ ಗಣನೀಯವಾಗಿ ತಪ್ಪಿಸಿಕೊಳ್ಳುವುದು ತಡೆಯಲು ಮಾಹಿತಿ  ನೀಡುವವರಿಗೆ  50 ಲಕ್ಷ ರೂಪಾಯಿ ಬಹುಮಾನ ನೀಡುವ  ಆದಾಯ ತೆರಿಗೆ ಮಾಹಿತಿ ಪುರಸ್ಕಾರ ಯೋಜನೆಗೆ ತಿದ್ದುಪಡಿ  ತರಲಾಗಿದೆ.

ಬೇನಾಮಿ ವ್ಯವಹಾರ ಮಾಹಿತಿ ಪುರಸ್ಕಾರ ಯೋಜನೆ 2018ರ ಅಡಿಯಲ್ಲಿ ವಿದೇಶಿಗರು ಸೇರಿದಂತೆ ಯಾವುದೇ ವ್ಯಕ್ತಿ, ಬೆನಾಮಿ ಆಸ್ತಿ, ವ್ಯವಹಾರದ ಬಗ್ಗೆ   ಜಂಟಿ ಅಥವಾ  ಹೆಚ್ಚುವರಿ ಆಯುಕ್ತರಿಗೆ ಮಾಹಿತಿ ನೀಡಬಹುದಾಗಿದೆ.

ಬೇನಾಮಿ ಆಸ್ತಿ ವ್ಯವಹಾರದ ಬಗ್ಗೆ  ಜನರು ಮಾಹಿತಿ ನೀಡುವುದನ್ನು ಪ್ರೋತ್ಸಾಹಿಸುವುದು  ಪುರಸ್ಕಾರ ಯೋಜನೆಯ ಉದ್ದೇಶವಾಗಿದೆ. ಅಂತಹ ಆಸ್ತಿಗಳಿಂದ  ಆದಾಯ ಗಳಿಸಬಹುದಾಗಿದೆ ಹೇಳಲಾಗಿದೆ.
ಬೇನಾಮಿ ವ್ಯವಹಾರ ಮಾಹಿತಿ ಪುರಸ್ಕಾರ ಯೋಜನೆ-2018ರ ಅಡಿಯಲ್ಲಿ ಬೇನಾಮಿ ಆಸ್ತಿ, ವ್ಯವಹಾರದ ಬಗ್ಗೆ   ಸೂಕ್ತ  ಮಾಹಿತಿ ನೀಡುವ ವ್ಯಕ್ತಿಗೆ 1 ಕೋಟಿ ರೂಪಾಯಿ ಬಹುಮಾನ ನೀಡಲಾಗುವುದು , ಅಂತಹ ಆಸ್ತಿಗಳನ್ನು  ಬೇನಾಮಿ ವ್ಯವಹಾರ ( ನಿರ್ಬಂಧ)  ತಿದ್ದುಪಡಿ ಕಾಯ್ದೆ 2016ರ ಪ್ರಕಾರ  ಹರಾಜು  ಹಾಕಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಮಾಹಿತಿ ನೀಡಿದ ವ್ಯಕ್ತಿಯ ಹೆಸರನ್ನು ಎಲ್ಲಿಯೂ ಬಹಿರಂಗಪಡಿಸುವುದಿಲ್ಲ, ಬಹುಮಾನ ಯೋಜನೆಯನ್ನು ಗೌಪ್ಯವಾಗಿಡಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಭರವಸೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT