ಸಂಗ್ರಹ ಚಿತ್ರ 
ದೇಶ

ಆಧಾರ್ ಗುರಿ ತಲುಪದ ಸಿಬ್ಬಂದಿಗಳ ವೇತನಕ್ಕೆ ಕತ್ತರಿ?

ಪ್ರತಿನಿತ್ಯ ಕನಿಷ್ಠ 16 ಜನರ ಆಧಾರ್ ಕಾರ್ಡ್ ಗಳನ್ನು ಬ್ಯಾಂಕ್ ಖಾತೆಗಳ ಜೊತೆಗೆ ಸಂಪರ್ಕಿಸದ ಸಿಬ್ಬಂದಿಗಳ ವೇತನ ಕಡಿತಗೊಳಿಸುವುದಾಗಿ ಸಿಬ್ಬಂದಿಗಳಿಗೆ ಖಾಸಗಿ ವಲಯದ ಬ್ಯಾಂಕ್ ಗಳು ಸೂಚನೆ ನೀಡಿವೆ ಎಂದು ತಿಳಿದುಬಂದಿದೆ...

ನವದೆಹಲಿ; ಪ್ರತಿನಿತ್ಯ ಕನಿಷ್ಠ 16 ಜನರ ಆಧಾರ್ ಕಾರ್ಡ್ ಗಳನ್ನು ಬ್ಯಾಂಕ್ ಖಾತೆಗಳ ಜೊತೆಗೆ ಸಂಪರ್ಕಿಸದ ಸಿಬ್ಬಂದಿಗಳ ವೇತನ ಕಡಿತಗೊಳಿಸುವುದಾಗಿ ಸಿಬ್ಬಂದಿಗಳಿಗೆ ಖಾಸಗಿ ವಲಯದ ಬ್ಯಾಂಕ್ ಗಳು ಸೂಚನೆ ನೀಡಿವೆ ಎಂದು ತಿಳಿದುಬಂದಿದೆ. 
ಆಧಾರ್ ಸಂಪರ್ಕ ಕುರಿತ ಗುರಿ ಸಾಧಿಸಲು ವಿಫಲವಾದ ಸಿಬ್ಬಂದಿಗಳ ವೇತನವನ್ನು ಕಡಿತಗೊಳಿಸುವುದಾಗಿ ಬ್ಯಾಂಕ್ ಗಳು ಸಿಬ್ಬಂದಿಗೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. 
ಯುಕೊ ಬ್ಯಾಂಕ್'ನ ಜೋಧ್ಪುರ ವಲಯ ಎಲ್ಲಾ ಶಾಖೆಗಳಿಗೆ ಪತ್ರೆ ಬರೆದಿದ್ದು, ದಿನಕ್ಕೆ 16 ಆಧಾರ್ ನೋಂದಣಿಯ ಗುರಿಯನ್ನು ಸಾಧಿಸುವಂತೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗುತ್ತಿದೆ. ಸಿಬ್ಬಂದಿಗಳು ಈ ಸೂಚನೆಯನ್ನು ತಪ್ಪಿದ್ದೇ ಆದರೆ, ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ವಿಧಿಸುವ ದಂಡವನ್ನು ವೇತನದಿಂದ ಕಡಿತ ಮಾಡಲಾಗುತ್ತದೆ ಎಂದು ಎಚ್ಚರಿಸಿದೆ. 
ಮೇ. 25 ರಂದು ಯುಕೊ ಬ್ಯಾಂಕ್ ಈ ಪತ್ರವನ್ನು ಬರೆದಿದ್ದು, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸೂಚನೆ ಮೇಲೆ ಈ ಪತ್ರವನ್ನು ಬರೆಯಾಗಿದೆ ಎನ್ನಲಾಗುತ್ತಿದೆ. ಎಲ್ಲಾ ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ವಲಯದ ಬ್ಯಾಂಕ್ ಗಳಿಗೆ ಸಚಿವಾಲಯ ಏ.15 ಪತ್ರ ಬರೆದು, ಆಧಾರ್ ಗುರಿ ಸಾಧನೆಗೆ ಮೇ.31ರ ಗಡುವು ನೀಡಿದೆ ಎಂದು ಹೇಳಲಾಗುತ್ತಿದೆ. 
ಯುಕೋ ಬ್ಯಾಂಕ್'ನ ಜೋಧ್ಪುರ ವಲಯದ ಉಪಮುಖ್ಯಸ್ಥ ಎಸ್.ಕೆ.ಪಾಟ್ನಿ ಅವರು ಪತ್ರ ಕುರಿತ ಮಾಹಿತಿಯನ್ನು ದೃಢಪಡಿಸಿದ್ದಾರೆ. ಅಲ್ಲದೆ, ಸೂಚನೆಯನ್ನು ಸಮರ್ಥಿಸಿಕೊಂಡಿರುವ ಅವರು, ಇದು ಬೆದರಿಕೆಯಲ್ಲ ಎಂದು ಹೇಳಿದ್ದಾರೆ. 
ಇದಲ್ಲದೆ ಯೂಕೊ ಬ್ಯಾಂಕ್ ನಲ್ಲಿರುವ ಇತರೆ ಆಧಾರ್ ಕೇಂದ್ರಗಳೂ ಕೂಡ ಸೂಚನೆ ಕುರಿತು ದೃಢಪಡಿಸಿವೆ. ಕೇಂದ್ರ ಕಚೇರಿಯ ಸೂಚನೆಯನ್ನಷ್ಟೇ ಪಾಲನೆ ಮಾಡುತ್ತಿರುವುದಾಗಿ ಸಿಬ್ಬಂದಿಗಳೂ ಕೂಡ ಹೇಳಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT