ಅಬು ಸಲೀಂ 
ದೇಶ

ಅಬು ಸಲೀಂ ಸುಲಿಗೆ ಪ್ರಕರಣ: ಜೂ.7ಕ್ಕೆ ವಿಚಾರಣೆ ಮುಂದೂಡಿಕೆ

ಪಾತಕಿ ಅಬು ಸಲೀಂ ಮೇಲಿನ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ದೆಹಲಿಯ ನ್ಯಾಯಾಲಯ ಜೂನ್.7 ಕ್ಕೆ ಮುಂದೂಡಿದೆ.

ನವದೆಹಲಿ: ಪಾತಕಿ ಅಬು ಸಲೀಂ ಮೇಲಿನ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು  ದೆಹಲಿಯ ನ್ಯಾಯಾಲಯ  ಜೂನ್.7 ಕ್ಕೆ ಮುಂದೂಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಯಾವ ರೀತಿಯ ಶಿಕ್ಷೆ ನೀಡಬೇಕೆಂಬ ಬಗ್ಗೆ ನಿರ್ಧರಿಸಲು  ಪಾಟಿಯಾಲ ಹೌಸ್ ನ್ಯಾಯಾಲಯದಲ್ಲಿ  ಇಂದು ವಾದ, ಪ್ರತಿವಾದ ನಡೆಯಿತು.

ಸುಲಿಗೆ ಪ್ರಕರಣ ಕುರಿತಂತೆ ಮೇ 30 ರಂದು ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯ ಇಂದಿಗೆ ಮುಂದೂಡಿತ್ತು.

2002ರಲ್ಲಿ  ದೆಹಲಿಯ ಉದ್ಯಮಿ  ಅಶೋಕ್ ಗುಪ್ತಾ ಅವರಿಗೆ 5 ಕೋಟಿ ರೂಪಾಯಿ ಬೇಡಿಕೆ ಇಟ್ಟ ಪ್ರಕರಣದಲ್ಲಿ ಸಲೀಂ ಆರೋಪಿಯಾಗಿದ್ದಾನೆ. ಆತನ ವಿರುದ್ಧ  ಐಪಿಸಿ ಸೆಕ್ಷನ್ 387, 506, 507 ರ ಅನ್ವಯ  ಪ್ರಕರಣ ದಾಖಲಿಸಲಾಗಿದೆ.

ಈ ಮಧ್ಯೆ ಇದೇ ಪ್ರಕರಣದಲ್ಲಿ  ಅಬು ಸಲೀಂ  ಸಹಚರರಾದ  ಚಂಚಲ್ ಮೆಹ್ತಾ,  ಮಜೀದ್ ಖಾನ್, ಪವನ್ ಕುಮಾರ್  ಮಿತ್ತಲ್ , ಮತ್ತು ಮೊಹಮ್ಮದ್ ಅಶ್ರಪ್ ಅವರನ್ನು ಖುಲಾಸೆಗೊಳಿಸಲಾಗಿದೆ. ಮತ್ತೊಬ್ಬ ಆರೋಪಿ ಸಜ್ಜನ್ ಕುಮಾರ್ ಸೊನಿ ವಿಚಾರಣೆ ಸಂದರ್ಭದಲ್ಲಿ ಸಾವನ್ನಪ್ಪಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT